Friday, June 20, 2025

Latest Posts

ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ

- Advertisement -

Dharwad News: ಧಾರವಾಡ: ಧಾರವಾಡದಲ್ಲಿಂದು ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಬಿಜೆಪಿ ಸದಸ್ಯರನ್ನು ರೇಸಾರ್ಟ್‌ನಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ಆಸೆ, ಆಮಿಷಗಳು, ಒತ್ತಡಗಳು ಬರಲು ಶುರುವಾಗಿದ್ದವು. ಒತ್ತಡ, ಆಮಿಷಗಳು ರಾಜಕಾರಣದಲ್ಲಿ ಹೆಚ್ಚಾಗಿವೆ. ಅನೇಕ ಸಲ‌ ಎಂಎಲ್‌ಎಗಳನ್ನೇ ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿದೆ. ಹಣ, ತೋಳ್ಬಲ ಬಳಸುತ್ತಿದೆ. ಹೀಗಾಗಿ ಎಲ್ಲರೂ ಒಂದೇ ಕಡೆ ಇದ್ವಿ. ನಮ್ಮ ಸದಸ್ಯರಿಗೆ ಅಭ್ಯಾಸ ವರ್ಗವೂ ಆಗಿರಲಿಲ್ಲ. ಅದನ್ನೆಲ್ಲ ಇಟ್ಟುಕೊಂಡು ಒಂದೇಡೆ ಸೇರಿಸಿದ್ವಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‌‌ನಿಂದ ಜಗದೀಶ ಶೆಟ್ಟರ್ ಎಂಎಲ್‌ಸಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್‌ ಅವರಿಗೆ ಟಿಕೆಟ್ ನೀಡಿದೆ, ಅವರಿಗೆ ಸಂಖ್ಯಾಬಲವಿದೆ. ಹೀಗಾಗಿ ಅವರಿಗೆ ಒಳ್ಳೆಯದು ಆಗಲಿ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಆರೋಪ ವಿಚಾರದ ಬಗ್ಗೆ ಮಾತನಾಡಿದ ಜೋಶಿ, ಕಾಂಗ್ರೆಸ್ ಪಕ್ಷ ತನ್ನ ಕೈಯಲ್ಲಿ ಅಕ್ಕಿ ಕೊಡಲು ಆಗುತ್ತಿಲ್ಲ,ಹೀಗಾಗಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳಾಯ್ತು. ಇನ್ನೂ ಒಂದು ಕೆಜಿ ಅಕ್ಕಿ ಸಹ ಕೊಟ್ಟಿಲ್ಲ. ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಕೊಡುತ್ತಿರುವುದು. ನ್ಯಾಷನಲ್ ಫುಡ್ ಸೆಕ್ಯೂರಿಟಿ ಆ್ಯಕ್ಟ್ ಅಡಿ ಕೊಡುತ್ತಿದ್ದೇವೆ. ಈ ಆ್ಯಕ್ಟ್ ಮಾಡಿದ್ದು ನಾವು ಅಂತಾ ಅವರು ಹೇಳುತ್ತಾರೆ. ಅವರು ಆ್ಯಕ್ಟ್ ಪಾಸ್ ಮಾಡಿದ್ದರೂ ಹಣ ಇಟ್ಟಿರಲಿಲ್ಲ. ಮೋದಿಯವರು ಬಂದ ನಂತರ ಇದನ್ನು ಶುರು ಮಾಡಿದೇವೆ ಎಂದು ಹೇಳಿದ್ದಾರೆ.

ಅಲ್ಲದೇ, 80 ಕೋಟಿ ಜನರಿಗೆ ನಾವು ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಉಳಿದ 60 ಕೋಟಿ ಜನಸಂಖ್ಯೆಗೆ ಕನಿಷ್ಠ ದರದಲ್ಲಿ ಅಕ್ಕಿ ಕೊಡಬೇಕಾಗುತ್ತದೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಹಾಗಾಗಿ ರಾಜ್ಯ ಸರ್ಕಾರ ಎಫ್‌‌ಸಿಐದವರು ಕೊಟ್ಟರೇ ಕೊಡುತ್ತೇವೆ ಎಂದು ಹೇಳಿಲ್ಲ. ಹತ್ತು ಕೆಜಿ ಅಂತಾ ಹೇಳಿದ್ದಾರೆ, ಈಗ ಮೋದಿ ಕೊಡುತ್ತಿರುವ 5ಕೆಜಿ ಬಿಟ್ಟು ಇವರು 10 ಕೆಜಿ ಕೊಡಬೇಕು. ಆದರೆ ಈಗ ಕೇಂದ್ರ ಸರ್ಕಾರದ ಮೇಲೆ ಕ್ಷುಲ್ಲಕ ಆರೋಪ ಮಾಡುತ್ತಿದ್ದಾರೆ ಎಂದು ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಲ್ಲ ರಾಜ್ಯ ಸರ್ಕಾರಗಳು 10 ಕೆಜಿ ಕೊಡುತ್ತೇವೆ ಎಂದರೆ ಮುಂದೆನು? ಎಲ್ಲರಿಗೂ ಕೇಂದ್ರ ಸರ್ಕಾರ ಅಕ್ಕಿ ಕೊಡಲು ಆಗುತ್ತಾ? ಕೆಲ ರಾಜ್ಯಗಳಲ್ಲಿ ಈಗ ಕೊಡುತ್ತಿದ್ದಾರೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ಹೆಚ್ಚುವರಿ ಅಕ್ಕಿ ಆಯಾ ರಾಜ್ಯಗಳು ತಮ್ಮ ವ್ಯವಸ್ಥೆಯಲ್ಲಿ ಕೊಡುತ್ತಿವೆ. ಅದರ ಬಗ್ಗೆ ವಿಚಾರ ಮಾಡದೇ ಘೋಷಣೆ ಮಾಡಿದ್ದಾರೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕುಣಿಯಲು ಬರದವರು ನೆಲ ಡೊಂಕು ಅಂದಂತೆ ಸಿದ್ದರಾಮಯ್ಯ ನೀತಿ ಆಗಿದೆ. ತಮಗೆ ಹಣಕಾಸಿನ ಹೊಂದಾಣಿಕೆ ಮಾಡಲು ಆಗದೇ ಆರೋಪ ಮಾಡಿದ್ದಾರೆ. ಸೌಜನ್ಯಕ್ಕೂ ಸಹ ರಾಜ್ಯ ಸರ್ಕಾರ 5 ಕೆಜಿ ಕೇಂದ್ರದ್ದು ಎಂದು ಹೇಳುತ್ತಿಲ್ಲ. ಇದು ಇವರ ದುರಂಹಕಾರ ಎಂದು ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಇವರು ಬಡವರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ನಾವು ಬಡವರ ಕಲ್ಯಾಣ ಮಾಡುತ್ತಿದ್ದೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ, ಯಾವುದೆ ವ್ಯವಸ್ಥೆ ಇಲ್ಲದೆ, ಯಾವುದೇ ಸರಿಯಾದ ಪ್ಲ್ಯಾನ್ ಇಲ್ಲದೇ ಮಾಡಿರುವ ಯೋಜನೆ. ಇದು ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ. ಶಿಸ್ತುಬದ್ಧವಾಗಿ ಯೋಜನೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಫ್ರೀ ಕೊಟ್ಟಷ್ಟೇ ಜನರ ಜೀವನವೂ ಅಷ್ಟೇ ಮುಖ್ಯ. ಇದನ್ನು ಸರ್ಕಾರ ಅರ್ಥ ಮಾಡಿಕ್ಕೊಳ್ಳಬೇಕು ಎಂದು ಜೋಶಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಕೋಲಾರದಲ್ಲಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ..

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

ಜಗದೀಶ್ ಶೆಟ್ಟರ್‌ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

- Advertisement -

Latest Posts

Don't Miss