ಉತ್ತರಾಧಿಕಾರಿ ಹೇಳಿಕೆ ಬಳಿಕ ಯತೀಂದ್ರ ಸುಳಿವು

ಕಾಂಗ್ರೆಸ್‌ ಪಕ್ಷದಲ್ಲಿ ಪವರ್‌ ಶೇರಿಂಗ್‌ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ.

ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯಾಗುವುದು ಅನಿವಾರ್ಯ ಎಂಬುದು ನಿಜ. ಕಾಂಗ್ರೆಸ್‌ನ ಬಹುಪಾಲು ಶಾಸಕರು ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ.

ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು, ಅನೇಕ ಶಾಸಕರು ಮತ್ತು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು. ಇದು ಪಕ್ಷದೊಳಗೆ ಸಿದ್ದರಾಮಯ್ಯ ಅವರಿಗೆ ಬಲವಾದ ಬೆಂಬಲವನ್ನು ಸೂಚಿಸುತ್ತದೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆಯ ಬಗ್ಗೆ, ಯಾವುದೇ ಆಂತರಿಕ ಚರ್ಚೆ ನಡೆದಿಲ್ಲ.

ಮುಖ್ಯಮಂತ್ರಿ ಅವರನ್ನು ಬದಲಾಯಿಸುವ ಬಗ್ಗೆ ಪಕ್ಷದೊಳಗೆ ಯಾವುದೇ ಮಾತುಕತೆ ನಡೆದಿಲ್ಲ. ನನ್ನ ತಂದೆಗಾಗಲಿ ಅಥವಾ ನನಗಾಗಲಿ ಅಂತಹ ಯಾವುದೇ ಚರ್ಚೆಗಳ ಬಗ್ಗೆ ತಿಳಿದಿಲ್ಲ. ಯಾರು ಮುಖ್ಯಮಂತ್ರಿಯಾಗಿದ್ದರೂ ಹೈಕಮಾಂಡ್‌ನ ಅನುಮೋದನೆಯನ್ನು ಹೊಂದಿರಬೇಕು. ಸಿದ್ದರಾಮಯ್ಯ ಮುಂದುವರಿದರೂ, ಅದು ಹೈಕಮಾಂಡ್‌ನ ಒಪ್ಪಿಗೆಯೊಂದಿಗೆ ಇರುತ್ತದೆ. ನನ್ನ ತಂದೆಯೂ ಅದೇ ಉದ್ದೇಶ ಇಟ್ಟುಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಹಲವಾರು ಆಕಾಂಕ್ಷಿಗಳಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಗಳನ್ನು ಹೊಂದಿರುವುದು ಸಹಜ. ಅದು ತಪ್ಪು ಎಂದು ನಾವು ಹೇಳಲಾಗುವುದಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.

About The Author