Saturday, June 21, 2025

Latest Posts

National ಯುದ್ಧ ಸ್ಮಾರಕದ ಜೊತೆ ಅಮರ್ ಜ್ಯೋತಿ ಲೀನ..

- Advertisement -

ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ಪಟ್ಟನೆ ಕಣ್ಣ ಮುಂದೆಯೇ ಬರುತ್ತದೆ. ಅಲ್ಲಿ ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವಾರ್ಥವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮೂಂದೆ ಆ ಸ್ಥಳದಲ್ಲಿ ಕಾಣಿಸುವುದಿಲ್ಲ.
ಏಕೆಂದರೆ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ಅಮರ್ ಜವಾನ್ ಜ್ಯೋತಿ ಲೀನವಾಗಲಿದೆ. ಅಮರ ಸೈನಿಕರ ಜ್ಯೋತಿಯು ಯುದ್ಧ ಸ್ಮಾರಕದಲ್ಲಿ ಉರಿಯಲಿದೆ. ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಆದರೆ ಅಮರ್ ಜ್ಯೋತಿಯನ್ನು ಆರಿಸುತ್ತಿಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದೆ.

ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಸಮಗ್ರ ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ, ಏರ್ ಮಾರ್ಷಲ್ ಬಲಭದ್ರ ರಾಧಾಕೃಷ್ಣ ಸಮ್ಮುಖದಲ್ಲಿ ಈ ಕಾರ್ಯ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ಇರುವ ಸಂದರ್ಭ ಅಮರ ಸೈನಿಕರಿಗೆ ಎರಡು ಪ್ರತ್ಯೇಕ ಜ್ಯೋತಿ ಸರಿ ಕಾಣುವುದಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲದೆ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಈಗಾಗಲೇ ಇಂಡಿಯಾ ಗೇಟ್ ನಲ್ಲಿ ಕೆತ್ತಲಾಗಿರುವ ಹುತಾತ್ಮರ ಹೆಸರುಗಳನ್ನೂ ಸಹ ಹೊಂದಿದೆ. ಅದರೊಂದಿಗೆ 1947-48ರ ಪಾಕಿಸ್ತಾನದೊಂದಿಗಿನ ಯುದ್ಧದಿಂದ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯವರೆಗೆ ವಿವಿಧ ಕಾರ್ಯಾಚರಣೆಗಳಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ರಕ್ಷಣಾ ಸಿಬ್ಬಂದಿಯ ಹೆಸರು, ಭಯೋತ್ಪಾದಕ ವಿರೋಧಿ ಚಟುವಟಿಕೆಯಲ್ಲಿ ಹುತಾತ್ಮರಾದ ಸೈನಿಕರ ಹೆಸರನ್ನೂ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗಿದೆ.

- Advertisement -

Latest Posts

Don't Miss