ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ. ಆ ರೀತಿ ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನು ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ. ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದಿದ್ದಾರೆ.
2028ರ ವಿಧಾನಸಭಾ ಚುನಾವಣೆಯಲ್ಲಿ ತಂದೆಯವರು ಸ್ಪರ್ಧಿಸಲ್ಲ ಎಂದಿದ್ದಾರೆ. ಅದಾದ ಮೇಲೆ ಜಾತ್ಯತೀತ ಸಿದ್ಧಾಂತ ಇಟ್ಟುಕೊಂಡ ಸಾಕಷ್ಟು ನಾಯಕರಿದ್ದಾರೆ. ಇವರೆಲ್ಲರನ್ನೂ ಸತೀಶ್ ಜಾರಕಿಹೊಳಿ ಮುನ್ನಡೆಸಲಿ 2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು. ಸೈದ್ಧಾಂತಿಕ ರಾಜಕಾರಣ ಮಾಡುವವರ ಪೈಕಿ ಸಚಿವ ಸತೀಶ್ ಸಹ ಒಬ್ಬರು. ಆ ರೀತಿ ಸಿದ್ಧಾಂತ ಇಟ್ಟುಕೊಂಡವರಿಗೆ ಸತೀಶ್ ಮಾರ್ಗದರ್ಶನ ಮಾಡಲಿ. ನಾಳೆಯೇ ಕೊನೆ ದಿನ ಅಲ್ಲ. 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿರುವುದಾಗಿ ಯತೀಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
ನವೆಂಬರ್ ಕ್ರಾಂತಿ ಕೇವಲ ಊಹಾಪೋಹ. ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಆ ರೀತಿ ಚರ್ಚೆ ನಡೆದಿಲ್ಲ. ಆ ರೀತಿ ಸಿಎಂ ಆಗುವ ಅರ್ಹತೆ ಇರುವ ಹಲವು ನಾಯಕರು ಇದ್ದಾರೆ. ಈ ಬಗ್ಗೆ ಎಲ್ಲಾ ಶಾಸಕರು ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಹೊರತುಪಡಿಸಿದ್ರೆ ಅವರ ಸ್ಥಾನ ತುಂಬುವ ಶಕ್ತಿ ಸತೀಶ್ಗೆ ಖಂಡಿತಾ ಇದೆ. ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿಯಾದ ಬಳಿಕ ಆ ಸ್ಥಾನ ತುಂಬುವ ಶಕ್ತಿ, ಕೆಲವೇ ನಾಯಕರಲ್ಲಿ ಇದೆ. ಅದರಲ್ಲಿ ಸತೀಶ್ ಜಾರಕಿಹೊಳಿ ಕೂಡ ಒಬ್ಬರು ಎಂದು, ಬೆಳಗಾವಿಯ ಕಪ್ಪಲಗುದ್ದಿಯಲ್ಲಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

