Saturday, July 27, 2024

Latest Posts

ಬಿಜೆಪಿಗೆ ಮತ ನೀಡಿ ಎಂದು ಪರೋಕ್ಷವಾಗಿ ಕನ್ನಡದಲ್ಲೇ ಕೇಳಿದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ

- Advertisement -

Political News: ಇಂದು ಕರ್ನಾಟಕದಲ್ಲಿ ಮೊದಲನೇಯ ಹಂತದ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರೆಲ್ಲ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಷಾ ಕನ್ನಡಿಗರಲ್ಲಿ ಪರೋಕ್ಷವಾಗಿ ಕನ್ನಡದಲ್ಲೇ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವ, ತುಷ್ಟೀಕರಣದ ರಾಜಕಾರಣವನ್ನು ತಿರಸ್ಕರಿಸುವ, ಕರ್ನಾಟಕದ ಘನತೆಯನ್ನು ಎತ್ತಿಹಿಡಿಯುವ, ನೀರಿನ ಕೊರತೆಯನ್ನು ನಿವಾರಿಸುವ, ನಾಗರಿಕರ ಭದ್ರತೆಯನ್ನು ಬಲಪಡಿಸುವ ಮತ್ತು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸರ್ಕಾರಕ್ಕೆ ಮತ ನೀಡಿ ಎಂದು ವಿನಂತಿಸುತ್ತೇನೆ ಎಂದು ಅಮಿತ್ ಶಾ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯ ಎರಡನೇ ಹಂತ ಇಂದು ಆರಂಭವಾಗುತ್ತಿದ್ದು, ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಪೂರ್ಣ ಉತ್ಸಾಹದಿಂದ ಚಲಾಯಿಸಲು ಮತ್ತು ಪ್ರಜಾಪ್ರಭುತ್ವವನ್ನು ಮತದಾನದ ಮೂಲಕ ಎತ್ತಿ ಹಿಡಿಯಲು ನಾನು ನಮ್ಮ ನಾಗರಿಕರಲ್ಲಿ, ವಿಶೇಷವಾಗಿ ಯುವಕರಲ್ಲಿ ಮನವಿ ಮಾಡುತ್ತೇನೆ. ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುವ ಮತ್ತು ವಿಕಸಿತ ಭಾರತ ಮಾಡುವ ನಮ್ಮ ಕನಸಿಗೆ ವೇಗ ನೀಡುವ ಸರ್ಕಾರವನ್ನು ಆಯ್ಕೆ ಮಾಡಲು ಎಲ್ಲಾ ಮತದಾರರಿಗೆ ಇದು ಸುವರ್ಣಾವಕಾಶವಾಗಿದೆ ಎಂದು ಜೆ.ಪಿ.ನಡ್ಡಾ ಹೇಳಿದ್ದಾರೆ.

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -

Latest Posts

Don't Miss