Sunday, May 11, 2025

Latest Posts

3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ

- Advertisement -

Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು.

ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಪ್ರತಿ ಬಾರಿಯಂತೆ ಈ ಬಾರಿಯೂ ಸಹ ಮೂರು ದಿನಗಳ ಉತ್ಸವ ನಡೆಸುವುದಾಗಿ ಘೋಷಣೆ ಮಾಡಿದ್ದು, 23ರಿಂದ 3 ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವ ನಡೆಯಲಿದೆ.

- Advertisement -

Latest Posts

Don't Miss