ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದರು.
ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ಹನುಮ ಮಾಲೆ ಹಾಕಿದರೆ ಹಿಂದೂಗಳ ಕತ್ತು ಕತ್ತರಿಸಲಾಗುತ್ತದೆ. 53 ಮುಸ್ಲಿಂ ರಾಷ್ಟ್ರಗಳ ಫಂಡ್ ಬರುತ್ತಿದೆ ಎಂದೆಲ್ಲಾ ಬೆದರಿಸಲಾಗಿದೆ ಎಂದು ಸಂಘಟನೆಗಳು ಹೇಳಿದ್ದವು. ಈ ಬಗ್ಗೆಮಂಡ್ಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಜೊತೆಗೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದರು. ನಿನ್ನೆ ಪ್ರಕರಣ ಸುಖಾಂತ್ಯವಾಗಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಜ್ಞಾನೇಂದ್ರ ಅವರು ಹೇಳಿದರು.
ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ