ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಎಂಎಲ್ಎ (PMLA)ಕಾಯಿದೆ ಅಡಿ ದೂರು ದಾಖಲಿಸಿದ್ದರು. ಇವರು ಈ ಬ್ಯಾಂಕ್ ನಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಆನಂದ ಅಪ್ಪುಗೋಳ ಸೇರಿ ಸೊಸೈಟಿ 13 ಜನರು ಠೇವಣಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು.




