Tuesday, June 16, 2026

Karnataka Tv

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ ಸಿಎಂ ಬೊಮ್ಮಾಯಿ

75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ, ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...

ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿಎಂ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...

ಧ್ವಜಾರೋಹಣ ನೆರವೇರಿಸಿದ ಸಿಎಂ

Banglore: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ಮಧ್ಯರಾತ್ರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಸಂಚಲನ ಮೂಡಿಸಿದ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ  ಕರೆಗೆ ದೇಶದ 40‌ಕೋಟಿ ಜನ ತಿರಂಗ ಹಾರಿಸಿದ್ದಾರೆ.  ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು. ಇವತ್ತಿನ‌ ದಿನ...

ವಿಶಿಷ್ಟ ಉಡುಗೆಯಲ್ಲಿ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ಸ್ವಾತಂತ್ರ್ಯ ದಿನವಾದ ಇಂದು ಕೆಂಪುಕೋಟೆಯಲ್ಲಿ ಹಬ್ಬದ ವಾತಾವರಣವಿತ್ತು.ದೇಶದ ಗೌರವಯುತ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದರು. ಪ್ರತಿ ಸಮಾರಂಭದಲ್ಲೂ ತಮ್ಮ ವಿಶೇಷವಾದ ಉಡುಗೆಯಿಂದ ಗಮನ ಸೆಳೆಯುತ್ತಾರೆ ನಮ್ಮ ಪ್ರಧಾನಿ ಈ ಬಾರಿಯು ಮೋದಿ ತಮ್ಮ ಉಡುಗೆಗೆ ಸದಾ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಇಂದು, ಕೆಂಪುಕೋಟೆಯಲ್ಲಿ...

ವೈವಿಧ್ಯತೆಯೇ ಭಾರತದ ಶಕ್ತಿ, ಭಾರತವೇ ಪ್ರಜಾಪ್ರಭುತ್ವದ ಜನನಿ ಎಂದ ಮೋದಿ

Dehali: ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಎಲ್ಲಡೆ ತಿರಂಗದ ಮೆರುಗು ಮನೆ ಮಾಡಿದೆ.ನಮ್ಮ ದೇಶದ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟ ವಿಫಲಗೊಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಗಳು ನಡೆದವು. ಆದರೆ ಇದು...

ಸರ್ಕಾರಿ ಜಾಹೀರಾತು ವಿವಾದ: ಸಣ್ಣತನದ ಪರಮಾವಧಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಸ್ವಾತಂತ್ರ್ಯ...

ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ನ ದಾಸನಪುರ...

ನಾಳೆ ಬೆಳಿಗ್ಗೆ 8 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ತಿಳಿಸಿದರು. ಇಲ್ಲಿನ ಮೈದಾನಕ್ಕೆ ಇಂದು ಸಂಜೆ ಭೇಟಿ ನೀಡಿ ವ್ಯವಸ್ಥೆ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಈ...

About Me

32334 POSTS
0 COMMENTS
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img