Saturday, July 4, 2026

Karnataka Tv

ಪಾಕ್ ಆಟಗಾರನ ಜೊತೆ ಚೇತೇಶ್ವರ ಪೂಜಾರ ಪಾದಾರ್ಪಣೆ

ಲಂಡನ್: ಭಾರತ ಕ್ರಿಕೆಟ್ ತಂಡದ ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಮತ್ತು ಪಾಕಿಸ್ಥಾನ ವಿಕೆಟ್ ಕೀಪರ್ ಮೊಹ್ಮದ್ ರಿಜ್ವಾನ್ ಕೌಂಟಿ ಕ್ರಿಕೆಟ್‍ನಲ್ಲಿ ಸಸೆಕ್ಸ್ ತಂಡದ ಪಾದಾರ್ಪಣೆ ಮಾಡಿದ್ದಾರೆ. ಕೌಂಟಿ ಕ್ರಿಕೆಟ್ ಚಾಂಪಿಯನ್‍ಶಿಪ್ ವಿಭಾಗ2ರ ಡರ್ಬಿಶೈರ್ ವಿರುದ್ಧದ ನಡೆದ ಪಂದ್ಯದಲ್ಲಿ ರಿಜ್ವಾನ್ ಹಾಗೂ ಪೂಜಾರ ಸಸೆಕ್ಸ್ ಪರ ಚೊಚ್ಚಲ ಪಂದ್ಯವಾಡಿದ್ದಾರೆ. ಪೂಜಾರ ಈ ಮೊದಲು ಆಂಗ್ಲರ ನಾಡಲ್ಲಿ...

ಟ್ರಯಲ್ಸ್ ಆಡಲು ನಿರಾಕರಿಸಿದ ಸೈನಾ ನೆಹ್ವಾಲ್

ಹೊಸದಿಲ್ಲಿ: ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮುಂಬರುವ ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪ್ರಶಸ್ತಿ ಉಳಿಸಿಕೊಳ್ಳುವುದು ಅನುಮಾನದಿಂದ ಕೂಡಿದ್ದು  ಮುಂಬರುವ  ಟ್ರಯಲ್ಸ್‍ಗಳನ್ನು ಆಡದಿರಲು ನಿರಾಕರಿಸಿದ್ದಾರೆ. ಕಾಮನ್‍ವೆಲ್ತ್‍, ಏಷ್ಯಡ್ ಹಾಗೂ ಉಬೇರ್ ಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲು ಒಂದೇ ಮಾನದಂಡವಾಗಿರುವುದರಿಂದ ಟ್ರಯಲ್ಸ್‍ಗಳನ್ನು ಆಡದಿರಲು ನಿರಾಕರಿಸಿರುವುದನ್ನು ಸೈನಾ ಬ್ಯಾಡ್ಮಿಂಟನ್ ಅಸೋಸಿಯೇಷನ್  ಇಂಡಿಯಾಕ್ಕೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ  ಟ್ರಯಲ್ಸ್ ...

ನೈಟ್ ರೈಡರ್ಸ್‍ಗೆ ಸನ್‍ರೈಸರ್ಸ್ ಸವಾಲ್

ಮುಂಬೈ:  ಇಂದು ಐಪಿಎಲ್‍ನ 25ನೇ ಪಂದ್ಯದಲ್ಲಿ  ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ. ಶುಕ್ರವಾರ ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಆರಂಭದ ಎರಡು ಪಂದ್ಯಗಳನ್ನು ಸೋತು ನಂತರ ಪುಟಿದೆದ್ದು ಎರಡೂ ಪಂದ್ಯಗಳನ್ನೂ ಗೆದ್ದಿರುವ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಕೋಲ್ಕತ್ತಾ ತಂಡದಿಂದ ಕಠಿಣ ಸವಾಲನ್ನು ಎದುರಿಸಲಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ಅಡಿದ 4...

ರಾಯಲ್ಸ್ ಮೇಲೆ ಗುಜರಾತ್ ಭರ್ಜರಿ ಸವಾರಿ

ಮುಂಬೈ:ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 33 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 193 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಗುಜರಾತ್ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಆರಂಭಿಕಾಗಿ ಕಣಕ್ಕಿಳಿದ ಜೋಸ್ ಬಟ್ಲರ್...

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. https://twitter.com/BZZameerAhmedK/status/1514837429529706500?t=yk4AfwgWck6jnriLOOGRJw&s=19 ಇಂದು ಸರಣಿ ಟ್ವಿಟ್ ನಲ್ಲಿ ಅವರು,  ಕೆ.ಎಸ್ ಈಶ್ವರಪ್ಪ ಅವರಿಂದ...

ಸೂಕ್ತ ರೀತಿಯಲ್ಲಿ ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು...

ರಾಯಚೂರು: ಅಕ್ರಮ ಮರಳು ಸಾಗಣೆ ಲಾರಿ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು

ರಾಯಚೂರು: ಬಿಸಿಲನಾಡು ನಾಡು ಎಂದು ಹೆಸರು ಪಡೆದ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲದೆ ನಡೆಯುತ್ತಿದೆ. ಆದ್ರೆ ಇದು ಅಧಿಕಾರಿಗಳ ಗಮನಕ್ಕೆ ಇದ್ದರೂ ಮೌನಕ್ಕೆ ಶರಣಾಗಿದ್ದಾರೆ. ಆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಇಂದು ಓರ್ವ ಯುವಕನನ್ನು ಬಲಿ ಪಡೆದಿದೆ. ಎಲ್ಲಿ ಅಂತ ಮುಂದೆ ಸುದ್ದಿ ಓದಿ.. ಹೆಣದ ಮುಂದೆ ಆಳುತ್ತ ಕುಳಿತ ಕುಟುಂಬಸ್ಥರು,...

‘ಹೈಕಮಾಂಡ್’ನಿಂದ ಈಶ್ವರಪ್ಪ ರಾಜೀನಾಮೆಗೆ ಯಾವುದೇ ಒತ್ತಡ ಇರಲಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದು ಎಂಬುದಾಗಿ ತುಂಬಾ ಯೋಚನೆ ಮಾಡಿ ಈಶ್ವರಪ್ಪ ಸಚಿವಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರ ರಾಜೀನಾಮೆಗೆ ಹೈಕಮಾಂಡ್ ನಿಂದ ಯಾವುದೇ ಒತ್ತಡ ಇರಲಿಲ್ಲ ಎಂಬುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ...

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ: ಮೂರು ದಿನಗಳ ಬಳಿಕ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಕೊನೆಗೂ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಡಕ್ಕೆ ಮಣಿದಿದ್ದಾರೆ. ಈ ಮೂಲಕ ಮೂರು ದಿನಗಳ ಬಳಿಕ ಪಟ್ಟು ಸಡಿಲಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೌದು.. ಕಳೆದ ಮೂರು ದಿನಗಳಿಂದ ರಾಜೀನಾಮೆ ನೀಡದೆ ದೂರ ಉಳಿದಿದ್ದ ಕೆಎಸ್ ಈಶ್ವರಪ್ಪ ಅವರ ನಡೆಯಿಂದ, ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿತ್ತು. ಅಲ್ಲದೇ ವಿಪಕ್ಷ ಕಾಂಗ್ರೆಸ್...

ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ʼನಿಂದ ದಲಿತ ಸಿಎಂ ಮಾಡುವೆ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಮಳವಳ್ಳಿ: ಜೆಡಿಎಸ್‌ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ಇಂದು ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; “ಹಿಂದೆ ನಮ್ಮ ಪಕ್ಷ ಹಾಸನ ಜಿಲ್ಲಾ ಪಂಚಾಯಿತಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಿತ್ತು. ಆಮೇಲೆ ಅನೇಕ ದಲಿತ ನಾಯಕರು ಪಕ್ಷದಲ್ಲಿ, ಸರಕಾರಗಳಲ್ಲಿ ಉನ್ನತ...

About Me

32516 POSTS
0 COMMENTS
- Advertisement -spot_img

Latest News

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು,...
- Advertisement -spot_img