ಅಯೋಧ್ಯಾ ರಾಮಮಂದಿರ ಉದ್ಘಾಟನೆ ಹಿನ್ನೆಲೆ, ಸೀತಾರಾಮ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ

Devanahalli News: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ದಿನಗಣನೆ ಹಿನ್ನೆಲೆ, ಸೀತಾರಾಮ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಕೆಂಪೇಗೌಡ ಏರ್ಪೋರ್ಟ್ನಲ್ಲೂ ರಾಮನ ಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ರಾಮನ ಮೂರ್ತಿಗಳನ್ನು ಕೊಂಡುಕೊಳ್ಳಲು, ಜನ ಮುಗಿಬೀಳುತ್ತಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ, ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ಮೂರ್ತಿಯ ಮಾರಾಟ ನಡೆಯುತ್ತಿದ್ದು, ವಿವಿಧ ಬಗೆಯ ಕಣ್ಮನಸೆಳೆಯುವ ಮೂರ್ತಿಗಳನ್ನು ಮಾರಾಟಕ್ಕೆ ಇಡಲಾಗಿದೆ. ಟರ್ಮಿನಲ್ ಒಳಭಾಗದ ಅಂಗಡಿಗಳಲ್ಲಿ ರಾಮನ ಮೂರ್ತಿಗಳಿಗೆ ಭಾರಿ ಬೇಡಿಕೆ ಇದ್ದು, ಪ್ರಯಾಣ ಮಾಡುವ ವೇಳೆ, ಪ್ರಯಾಣಿಕರು ಸೀತಾ ರಾಮ ಮತ್ತು ಹನುಮನ ಮೂರ್ತಿಯನ್ನು ಖರೀದಿ ಮಾಡುತ್ತಿದ್ದಾರೆ.

ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’

About The Author