ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ

ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕು ಗಾಯಗೊಂಡಿತ್ತು.

ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ  ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ ಚೇತರಿಸಿಕೊಳ್ಳುತ್ತಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿದೆ.

ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 1

About The Author