ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮಂತ್ರಿಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಲ್ವರು ಗೆದ್ದಿದ್ದಾರೆ. ಆ ನಾಲ್ಕೂ ಜನರಲ್ಲಿ ನಾನು ಹಿರಿಯನಾಗಿದ್ದೇನೆ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ . ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದೆ . ಮೇಲ್ಜಾತಿಯವರು ಟಚಬಲ್ಸ್ ಗೆ ಮಾತ್ರವೇ ಅವಕಾಶ ನೀಡ್ತಾರೆ . ಅನ್ ಟಚಬಲ್ಸ್ ಮೂರು ಬಾರಿ ಗೆಲ್ಲುವುದು ಪ್ರಯಾಸವೇ ಹೌದು. ಹಿಂದೆ 40 ವರ್ಷಗಳ ಹಿಂದೆ ಚೆನ್ನಯ್ಯ ಎಂಬುವರು ಮಂತ್ರಿ ಆಗಿದ್ದರು.
ಅದು ಬಿಟ್ರೆ ಜಿಲ್ಲೆಯಲ್ಲಿ ಬಲಿಜ ಸಮುದಾಯಕ್ಕೆ ಇದುವರೆಗೂ ಮಂತ್ರಿ ಸ್ಥಾನ ಕೊಟ್ಟಿಲ್ಲ . ಕೋಲಾರ ಜಿಲ್ಲೆಯಲ್ಲಿ ಬಲಿಜ ಸಮುದಾಯದವರು ಹೆಚ್ಚಾಗಿ ಇರುವುದರಿಂದ ನಮ್ಮ ಸಮುದಾಯಕ್ಕೆ ಅವಕಾಶ ಸಿಗಲಿ ಅಂತ ಒತ್ತಾಯ ಮಾಡ್ತಿದ್ದಾರೆ . ನಮ್ಮ ಬೆಂಬಲಿಗರು ಸಹ ಯಾವುದೇ ಹೋರಾಟಕ್ಕೆ ಸಿದ್ಧ ಎಂದು ಹೇಳ್ತಿದ್ದಾರೆ . ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದರು.
‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ ಸಿದ್ಧನಾಗ್ತೇನೆ’
‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’