Saturday, July 27, 2024

Latest Posts

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

- Advertisement -

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ ಇಲ್ಲಿಯವರೆಗೆ ಎಷ್ಟು ಮಂದಿಗೆ ಉದ್ಯೋಗವನ್ನು ನೀಡಿದೆ ಎಂದು ಪ್ರಶ್ನಿಸಿದ್ದಾರೆ. 2014ರಲ್ಲಿ ಬಿಜೆಪಿ (bjp) ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಇಷ್ಟೊತ್ತಿಗೆ 15 ಕೋಟಿ ಜನರಿಗೆ ಉದ್ಯೋಗ ನೀಡಬೇಕಿತ್ತು. ಆದರೆ ನಿಜವಾಗಿಯೂ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ? ಈ ಬಾರಿಯ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳ ಭರವಸೆ ನೀಡಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಹಾಗೆಯೇ ಕೇಂದ್ರ ಸರ್ಕಾರದಲ್ಲಿ 9 ಲಕ್ಷ ಹುದ್ದೆಗಳು ಖಾಲಿ ಇವೆ. ರೈಲ್ವೇಯಲ್ಲಿ 15%, ರಕ್ಷಣೆಯಲ್ಲಿ 40% ಮತ್ತು ಗೃಹ ವ್ಯವಹಾರಗಳಲ್ಲಿ 12% ಹುದ್ದೆಗಳು ಖಾಲಿ ಇವೆ. ಇಂದು ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ 9% ಮತ್ತು ಗ್ರಾಮೀಣ ಪ್ರದೇಶದಲ್ಲಿ 7.2%ರಷ್ಟಿದೆ. ಹೀಗಿದ್ದೂ ಕೇಂದ್ರ ಸರ್ಕಾರದ ಇವುಗಳ ಭರ್ತಿಗೆ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಪಿಎಂ ಕೇರ್ ಫಂಡ್ನಲ್ಲಿ ನಮ್ಮ ಹಣವೂ ಇದೆ. ಯೋಧರ ಹಣವೂ ಇದೆ. NGOಗಳು ಮತ್ತು ಕೈಗಾರಿಕೋದ್ಯಮಿಗಳ ಹಣವೂ ಸೇರಿದೆ. ಪಾರದರ್ಶಕತೆಯ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ, ಪಿಎಂ ಕೇರ್ಸ್ ಫಂಡ್ (PM CARES Fund) ಏಕೆ ಆಡಿಟ್ ಮಾಡಬಾರದು ಎಂದು ಪ್ರಶ್ನೆ ಮಾಡಿದರು. ಕೋವಿಡ್–19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಿ, ಪರಿಹಾರ ಕಾರ್ಯಗಳಿಗೆ ಬಳಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತುಸ್ಥಿತಿಗಳ ಪರಿಹಾರ ನಿಧಿ–ಪಿಎಂ ಕೇರ್ಸ್’ ಅನ್ನು ಸ್ಥಾಪಿಸಿದೆ. ಏನಿದೆಯೋ ಅದು ತಮ್ಮದು ಎಂದು ನೀವು ತಿಳಿದುಕೊಂಡಿರಬಹುದು. ಆದರೆ ಅದು ತಪ್ಪು, ಅದು ನಿಮ್ಮದಲ್ಲ. ಅದು ಜನರ ಹಣ. ಈ ಹಣ ಎಲ್ಲಿಂದ ಬಂತು? ಎಷ್ಟು ಬಂದಿದೆ? ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು.

- Advertisement -

Latest Posts

Don't Miss