Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ವಿರುದ್ಧವೇ ಆರೋಪಿಸಿದ್ದು, ಕೊರೋನಾ ಕಾಲದಲ್ಲಿದ್ದ ಸರ್ಕಾರ ಕೋಟಿ ಕೋಟಿ ಲೂಟಿ ಮಾಡಿದ್ದರು ಎಂದು ಹೇಳಿದ್ದರು. ಇದೀಗ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ತರಹೇವಾರಿ ಪ್ರಶ್ನೆ ಕೇಳಿದ್ದಾರೆ.
ಕೊರೊನಾ ಕಾಲದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ?
ಶಾಸಕರಾದ ಬಸನಗೌಡ ಪಾಟೀಲ್ ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ಅ ವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ. ತನ್ನನ್ನು ದೇಶದ “ಚೌಕಿದಾರ” ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು “ನ ಖಾವೂಂಗಾ ನಾ ಖಾನೆ ದೂಂಗಾ” ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?
ಕೊರೊನಾ ಕಾಲದಲ್ಲಿ @BSYBJP ನೇತೃತ್ವದ @BJP4Karnataka ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ @BasanagoudaBJP ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ…
— Siddaramaiah (@siddaramaiah) December 26, 2023
ಶಾಸಕರಾದ @BasanagoudaBJP ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ…
— Siddaramaiah (@siddaramaiah) December 26, 2023
ಬಿಜೆಪಿ ಶಾಸಕ @BasanagoudaBJP ಅವರು ಮಾಜಿ ಮುಖ್ಯಮಂತ್ರಿ @BSYBJP ಮತ್ತು ಅವರ ಪುತ್ರ @BYVijayendra ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ @BJP4Karnataka ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ…
— Siddaramaiah (@siddaramaiah) December 26, 2023
ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ
‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’