ಬಸವರಾಜ್ ಬೊಮ್ಮಾಯಿ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಇಂದು ತಾವು ಮಾತ್ರ ಪ್ರಮಾಣ ವಚನವನ್ನು ಸ್ವೀಕರಿಸುವುದಾಗಿ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ ಹೈಕಮಾಂಡ್‌ನಿಂದ ಸೂಚನೆ ಬಂದಲ್ಲಿ ಬೊಮ್ಮಾಯಿ ಅವರೊಂದಿಗೆ ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಮೂವರು ಶಾಸಕರು ಕೂಡ ಪದಗ್ರಹಣ ಮಾಡುವ ಸಾಧ್ಯತೆಗಳಿಗೆ.

About The Author