ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು ಹುಲಿಕುಂಟೆ ಗ್ರಾಮಸ್ಥರು ಧರಣಿ ನಡೆಸಿದ್ದರು. ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಮೃತರ ಿಬ್ಬರ ಕುಟುಂಬಕ್ಕೂ ತಲಾ 25.ಲಕ್ಷ ರೂ. ಪರಿಹಾರವನ್ನು ಬಿಬಿಎಂಪಿ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ. ಧರಣಿ ಕುಳಿತವರನ್ನು ಮನವೊಲಿಸಿ ಮೃತ ದೇಹಗಳನ್ನು ಶವಾಗಾರಕ್ಕೆ ಕಳುಹಿಸಿದ್ದಾರೆ.
ಗರ್ಭಾವಸ್ಥೆಯಲ್ಲಿ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ..!
ನಿಮ್ಮ ಮುಖದ ಮೇಲೆ ರಂಧ್ರಗಳಿದೆಯೇ..ಹಾಗಾದರೆ ಈ ಫೇಸ್ ಪ್ಯಾಕ್ ಟ್ರೈ ಮಾಡಿ..!
ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುತ್ತಿದ್ದೀರಾ..? ಅದ್ಭುತ ಫಲಿತಾಂಶ ಈ ರೋಗಗಳು ಮಾಯ..!