Beluru News : ಬೇಲೂರಿನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯೇ ಪತಿ ಹಾಗು ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದಂತಹ ಘಟನೆ ನಡೆದಿದೆ. ದಿನೇಶ್ ಮೋಹನ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಸವನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು ಮಮತಾ ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಮಹಿಳೆ ಎಂದು ಹೇಳಲಾಗಿದೆ.
ಬೆಳಿಗ್ಗೆಯಿಂದ ದಿನೇಶ್ ಹಾಗೂ ಮಮತಾ ನಡುವೆ ಮದ್ಯ ಸೇವನೆ ವಿಚಾರವಾಗಿ ನಡೆಯುತ್ತಿದ್ದ ಜಗಳ ಅತಿರೇಕಕ್ಕೆ ಅತಿರೇಕಕ್ಕೆ ತಿರುಗಿ ಮಚ್ಚಿನಿಂದ ಪತಿ ಹಾಗೂ ಅಣ್ಙನ ಮೇಲೆಯೇ ಹಲ್ಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ.
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅತಿಯಾಗಿ ನಡೆಯುತ್ತಿದ್ದು ಅಕ್ರಮ ಮದ್ಯ ಮಾರಾಟದಿಂದ ಪ್ರತಿನಿತ್ಯ ಕುಟುಂಬದಲ್ಲಿ ಜಗಳ ಹೆಚ್ಚಾಗುತ್ತಿವೆ, ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ಎನ್ನಲಾಗಿದೆ.
Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ
Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ
Nandini Milk : ನಂದಿನಿ ಹಾಲು ಪ್ರತಿ ಲೀಟರ್ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ