ಹಿಂದೂ ಧರ್ಮದಲ್ಲಿ ಬಾಳೆ ಎಲೆ ಊಟಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಹಬ್ಬ ಹರಿದಿನಗಳಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದು ವಾಡಿಕೆ. ಹಾಗಾದ್ರೆ ಯಾಕೆ ಬಾಳೆ ಎಲೆಯಲ್ಲಿ ಊಟ ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ.

ಬಾಳೆ ಎಲೆಯಲ್ಲಿ ಊಟ ಮಾಡುವುದು ಅತೀ ಉತ್ತಮ. ಬಿಸಿ ಬಿಸಿ ಊಟ ಮಾಡುವಾಗ ನೀವು ಪ್ಲಾಸ್ಟಿಕ್ ತಟ್ಟೆಯಲ್ಲಿ ಊಟ ಮಾಡಿದ್ರೆ, ಪ್ಲಾಸ್ಟಿಕ್ ಅಂಶದ ಜೊತೆ ಆಹಾರ ನಮ್ಮ ದೇಹ ಸೇರಿ ಆರೋಗ್ಯ ಹಾಳಾಗುತ್ತದೆ. ಆದ್ರೆ ನೀವು ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ, ಅದರಲ್ಲಿರುವ ಉತ್ತಮ ಗುಣ ನಿಮ್ಮ ಆಹಾರದ ಜೊತೆ ಸೇರಿ ನಿಮ್ಮ ದೇಹ ಸೇರಿ ಆರೋಗ್ಯ ಸುಧಾರಿಸುವಂತೆ ಮಾಡುತ್ತದೆ.
ಬಾಳೆ ಎಲೆ ಊಟ ಆರೋಗ್ಯಕ್ಕೂ ತಂಪಾಗಿರುವುದರಿಂದ ಉಷ್ಣತೆ ಹೆಚ್ಚಿರುವ ಪ್ರದೇಶದಲ್ಲಿ ಬಾಳೆ ಎಲೆ ಊಟವನ್ನ ಪ್ರತಿನಿತ್ಯ ಮಾಡಲಾಗುತ್ತದೆ. ಉದಾಹರಣೆಗೆ ಸಮುದ್ರದ ಹತ್ತಿರವಿರುವ ಪ್ರದೇಶದಲ್ಲಿ ವಾಸಿಸುವ ಜನ ಹೆಚ್ಚಾಗಿ ಬಾಳೆ ಎಲೆ ಊಟ ಮಾಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ ತಂಪಾದ ಆಹಾರ ಸೇವಿಸುವುದರೊಂದಿಗೆ, ಬಾಳೆ ಎಲೆಯಲ್ಲಿ ಊಟ ಮಾಡುವುದು ಆರೋಗ್ಯಕ್ಕೆ ಅತೀ ಉತ್ತಮ.
ಇನ್ನು ಶ್ರಾದ್ಧದ ಸಮಯದಲ್ಲಿ ಹಿರಿಯರ ಪೂಜೆಯ ಪ್ರಸಾದವನ್ನು ಬಾಳೆ ಎಲೆಯಲ್ಲೇ ಇಟ್ಟು ಕಾಗೆ ಮತ್ತು ದನಕ್ಕೆ ಅರ್ಪಿಸಲಾಗುತ್ತದೆ. ಅಲ್ಲದೇ, ದಕ್ಷಿಣ ಭಾರತದ ಹಲವೆಡೆ ಹೂವುಗಳು ಬಾಡಿ ಹೋಗದೇ, ತುಂಂಬ ಹೊತ್ತು ಫ್ರೆಶ್ ಆಗಿರಲು ಹೂವುಗಳನ್ನು ಬಾಳೆ ಎಲೆಯಿಂದ ಸುತತಿ ಕೊಡಲಾಗುತ್ತದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.