Saturday, June 21, 2025

Latest Posts

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

- Advertisement -

Banglore News:

ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಮಳೆ ಬಂದ ಹಿನ್ನೆಲೆಯಲ್ಲಿ ಅದೇ ಕಟ್ಟಡದ ಕೆಳಗಿರುವ ರೂಮ್‍ನಲ್ಲಿ ಕಾರ್ಮಿಕರು ಮಲಗಿದ್ದರು. ರಾತ್ರಿ ಸುರಿದ ಭಾರೀ ಮಳೆಗೆ ಸಂಪೂರ್ಣ ಬಿಲ್ಡಿಂಗ್ ಕುಸಿದಿದ್ದು, ಈ ವೇಳೆ ಕೆಳಗೆ ರೂಮ್‍ನಲ್ಲಿ ಮಲಗಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಘಟನೆ ಸಂಬಂಧಿಸಿ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಬಿಲ್ಡಿಂಗ್‍ನಿಂದ ಹೊರ ತೆಗೆದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

- Advertisement -

Latest Posts

Don't Miss