ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ದರವನ್ನು ನಿಗದಿ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರೋ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್, ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ಹಾಗೂ ಕಡಲೆ 5,650 ರೂ. ನಿಗದಿಪಡಿಸಲಾಗಿದೆ ಅಂತ ಅಂದಿದ್ದಾರೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನ 15.02 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ
ರಾಜ್ಯ ಸರಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರಕಾರವು 3,06,150 ಮೆಟ್ರಿಕ್ ಟನ್ ಖರೀದಿಗೆ ಅನುಮತಿ ನೀಡಿದೆ. ಪ್ರಸ್ತುತ ಕಡಲೆಯನ್ನು 10.03ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಅಂದಾಜು 6.63 ಲಕ್ಷ ಮೆಟ್ರಿಕ್ಟನ್ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ಇನ್ನು ಕೇಂದ್ರ ಸರಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲಾಗಿದೆ. ಇನ್ನು ಖರೀದಿ ಕೇಂದ್ರ ಆರಂಭಿಸುವಂತೆ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ