Bengaluru News: ಬೆಂಗಳೂರು: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮನೆ ಕೆಲಸಗಾರ, 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಜಸ್ಥಾನ ಮೂಲದ ಕೇತರಾಮ್, ಜ್ಯುವೆಲ್ಲರಿ ಶಾಪ್ ಮಾಲೀಕ ಅರವಿಂದ್ ಕುಮಾರ್ ಥಾಡೆ ಅವರ ಮನೆ ಕೆಲಸಗಾರನಾಗಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಸೇರಿಕೊಂಡಿದ್ದನು. ತನ್ನ ಮಾಲೀಕನೊಂದಿಗೆ ಒಳ್ಳೆಯವನಂತೆ ನಟಿಸುತ್ತಿದ್ದ ಕೇತರಾಮ್, ಆರ್ಥಿಕ ವ್ಯವಹಾರಗಳನ್ನೆಲ್ಲಾ ಅರಿತುಕೊಂಡಿದ್ದ..
ಆದರೆ, ದಸರಾ ಹಬ್ಬ ಹಿನ್ನೆಲೆ ಅರವಿಂದ್ ಕುಮಾರ್ ಅವರು ಮುಂಬೈಗೆ ತೆರಳುವ ಸಂದರ್ಭದಲ್ಲಿ ಅವರ ಬ್ಯಾಗ್ನಲ್ಲಿದ್ದ ಬೀಗವನ್ನು ಕೇತರಾಮ್ ಕಳವು ಮಾಡಿದ್ದಾನೆ. ಬಳಿಕ ತನ್ನದೇ ಊರಿನ ರಾಕೇಶ್ ಎಂಬಾತನನ್ನು ಕರೆಸಿಕೊಂಡು ಮಾಲೀಕನ ಜ್ಯುವೆಲ್ಲರಿ ಅಂಗಡಿ ಬೀಗ ತೆರೆದು ಒಳಗೆ ನುಗ್ಗಿದ್ದಾರೆ.
ಬಳಿಕ ಅಂಗಡಿಯಲ್ಲಿದ್ದ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಸ್ಥಳೀಯರು ಅರವಿಂದ್ ಅವರ ಪುತ್ರನಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅರವಿಂದ್ ಮಗ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್