Political News: ಈ ಬಾರಿ ಭಾರತ ರತ್ನ ಘೋಷಣೆಯಾದವರಲ್ಲಿ ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರ ಹೆಸರು ಕೂಡ ಇದೆ. ಅಡ್ವಾಣಿಯವರಿಗೆ ವಯಸ್ಸಾದ ಕಾರಣ, ಪ್ರಧಾನಿ ಮೋದಿ ಅವರ ಮನೆಗೆ ಹೋಗಿ, ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬಳಿಕ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದರು. ಅದೇ ರೀತಿ ಅವರ ಮನೆಗೆ ಹೋಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಮಾಜಿ ಗೃಹ ಸಚಿವ ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜಗದೀಪ್ ಧನಕರ್ ಕೂಡ ಈ ವೇಳೆ ಅಡ್ವಾಣಿ ನಿವಾಸದಲ್ಲಿ ಉಪಸ್ಥಿತರಿದ್ದರು.
ಇನ್ನು ಶನಿವಾರದ ದಿನವೇ ಯಾರ್ಯಾರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿತ್ತು. ಆದರೆ ಅನಾರೋಗ್ಯ ಕಾರಣ ಅಡ್ವಾಣಿಯವರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಹೀಗಾಗಿ ಗಣ್ಯರೆಲ್ಲ ಅವರ ಮನೆಗೇ ಹೋಗಿ ಭಾರತ ರತ್ನ ಪ್ರಶಸ್ತಿ ನೀಡಿ, ಗೌರವಿಸಿದರು. ರಾಮಮಂದಿರ ಉದ್ಘಾಟನೆ ದಿನವೂ ಕೂಡ ಅಡ್ವಾಣಿ ಅವರು ಕಾಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.
ಜೋಶಿಯವರನ್ನ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ
ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು