ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಕೊಡ್ತಿನಿ ಅಂಥ ಹೇಳಿದ್ದೀರಾ. ಒಬ್ಬೊಬ್ಬರು ನೂರು ಓಟು ಹಾಕಿಸುವ ಶಕ್ತಿ ಇದೆ ಅನ್ಕೊತಿನಿ. ಜೆಡಿಎಸ್ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಚಿರಋಣಿ ಆಗಿರ್ತಿವಿ. ಜೆಡಿಎಸ್ ಪಕ್ಷದವರೆಲ್ಲಾ ನಿಮಗೆ ಚಿರಋಣಿ ಆಗಿರ್ತಿವಿ. ಅದರ ಜೊತೆ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತೆ. ರಾಮ ಸೇತುವೆ ಕಟ್ಟುವಾಗ ಅಳಿಲು ಕೂಡ ಸಹಾಯ ಮಾಡಿತ್ತು. ಅದರಿಂದ ಅಳಿಲು ಸೇವೆ ಅಂತ ಹೆಸರು ಬಂತು ಅಂತ ಮಾತನಾಡುತ್ತಾರೆ. ಸ್ವರೂಪ್ಗೆ ಸಹಾಯಮಾಡಿ ಸಹೋದರ, ಸಹೋದರಿಯರಾಗಿ ನಿಂತಿದ್ದೀರಾ. ಮುಂದಿನ ದಿನಗಳಲ್ಲಿ ನೀವು ನಮ್ಮ ಜೊತೆ ಇರ್ತಿರಾ, ನಿಮ್ಮ ಜೊತೆ ನಾವು ಇರ್ತಿವಿ’ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಯಾವುದೇ ಧಮ್ಕಿಗೆ ನೀವ್ಯಾರು ಹೆದರಬಾರದು. ನಿಮ್ಮ ಎಲ್ಲಾ ಟೈಂನಲ್ಲೂ ಜೊತೆಗೆ ಇರ್ತಿವಿ. ನಾವು ಯಾವಾಗ್ಲೂ ಗೂಂಡಾಗಿರಿ ರಾಜಕಾರಣ ಮಾಡ್ದವ್ರಲ್ಲಾ. ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳ್ತಿವಿ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ ಎಂದು ಭವಾನಿ ರೇವಣ್ಣ ಪರೋಕ್ಷವಾಗಿ ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ರಿಲೀಸ್: ಭಜರಂಗದಳ, ಪಿಎಫ್ಐ ನಿಷೇಧಕ್ಕೆ ನಿರ್ಧಾರ..
‘ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್, ಭಜರಂಗದಳ ಟಚ್ ಮಾಡಲಿ ನೋಡೋಣ’