ಚಾಮರಾಜನಗರ: ಈ ಕಂಪನಿಯವರು ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ಚಾಮರಾಜನಗರದಲ್ಲಿ ಈ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದಕ್ಕೆ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ.
ಗಾಳಿ ಮತ್ತು ಸೌರ ವಿದ್ಯುತ್ ಉತ್ಪಾದನೆ ಹಾಗೂ ಶೇಖರಣೆ ಸುಲಭದ ಕೆಲಸವಲ್ಲ. ಈ ಕೆಲಸಕ್ಕೆ ನೀವು ಮುಂದಾಗಿರುವುದು ಅತ್ಯುತ್ತಮ ನಿರ್ಧಾರವಾಗಿದೆ. ನಿಮಗೆ ಅಗತ್ಯವಾದ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ನಿಮ್ಮ ಈ ಪ್ರಯತ್ನ ಯಶಸ್ವಿಯಾಗಲಿ.
ನಮ್ಮ ಜಿಲ್ಲಾ ಸಚಿವರ ಮನವಿಯಂತೆ ಉದ್ಯೋಗದಲ್ಲಿ ನೀವು ಸ್ಥಳೀಯ ಜನರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು. ಚಾಮರಾಜನಗರದ ಜನ ಬಹಳ ಬದ್ಧತೆ ಹೊಂದಿರುವ ಉತ್ತಮ ಜನರಿದ್ದಾರೆ. ಅವರಿಗೆ ನೀವು ಅವಕಾಶ ಕಲ್ಪಿಸಿಕೊಡಬೇಕು. ಈ ಭಾಗದ ಜನ ಕೂಡ ಸಾವಿರಾರು ಕೋಟಿ ಬಂಡವಾಳ ಹಾಕಿ ಉದ್ಯೋಗ ಸೃಷ್ಟಿಸುತ್ತಿರುವ ಈ ಕಂಪನಿಯವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ.
ನಾನು ಇಂಧನ ಸಚಿವನಾದಾಗ, ಈ ಇಲಾಖೆ ಜವಾಬ್ದಾರಿ ಯಾಕೆ ತೆಗೆದುಕೊಂಡಿದ್ದೀಯಾ? ಈ ಇಲಾಖೆಯಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಇದೆ ಈ ಇಲಾಖೆ ಬೇಡ ಎಂದು ಸಲಹೆ ನೀಡಿದ್ದರು. ಆದರೆ ಯಾವುದು ಮಾಡಲು ಅಸಾಧ್ಯವೋ ಅದನ್ನು ಸಾಧಿಸಿ ತೋರಿಸುವುದು ನನ್ನ ಹಂಬಲ ಹಾಗೂ ಛಲವಾಗಿದೆ. ನಾನು ಇಲಾಖೆ ಜವಾಬ್ದಾರಿ ತೆಗೆದುಕೊಂಡಾಗ ರಾಜ್ಯದಲ್ಲಿ 10 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿತ್ತು. ನಾನು ಅಧಿಕಾರ ಬಿಟ್ಟಾಗ ಇದರ ಪ್ರಮಾಣ 23 ಸಾವಿರ ಮೆ.ವ್ಯಾಟ್ ಗೆ ಏರಿಕೆಯಾಗಿತ್ತು. ನಮ್ಮ ಸರ್ಕಾರ ಇನ್ನು 5 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಗೆ ಕಾರ್ಯಕ್ರಮ ರೂಪಿಸಿದೆ.
ಇಡೀ ವಿಶ್ವದಲ್ಲೇ ಗಮನ ಸೆಳೆದ ಸೋಲಾರ್ ಪಾರ್ಕ್ ಅನ್ನು ತುಮಕೂರಿನ ಪಾವಗಡದಲ್ಲಿ ನಿರ್ಮಾಣ ಮಾಡಿದೆವು. ರೈತರಿಂದ ಜಮೀನು ಖರೀದಿಸದೇ, ಅವರನ್ನು ಪಾರ್ಟ್ನರ್ ಆಗಿ ಮಾಡಿ ಈ ಯೋಜನೆ ಮಾಡಿದ್ದು, ವಿಶ್ವಕ್ಕೆ ಮಾದರಿ ಆಗಿತ್ತು. ಸೂರ್ಯ ಮತ್ತು ಗಾಳಿ ಪ್ರಕೃತಿ ಭಾಗವಾಗಿದ್ದು, ಇವುಗಳನ್ನು ಬಳಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಈ ಭಾಗದಲ್ಲೂ ಸೌರಶಕ್ತಿ ಉತ್ಪಾದಿಸುವ ಕೆಲಸ ಯಶಸ್ವಿಗೊಳಿಸಿದ್ದೇವೆ.
Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?
Tweet viral: ಬಿಜೆಪಿಗರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ..!
Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ ಜಿಲ್ಲೆ