Bigboss news:
ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್ ಮಾಡಬೇಕೇ ಹೊರತು, ಇನ್ನೊಬ್ಬರ ಜೊತೆ ಚರ್ಚೆ ಮಾಡಿ ತೀರ್ಮಾನಕ್ಕೆ ಬರುವಂತಿಲ್ಲ. ಆದರೆ ಜಶ್ವಂತ್ ಅವರು ಆ ನಿಯಮ ಮುರಿದಿದ್ದಾರೆ. ಗರ್ಲ್ಫ್ರೆಂಡ್ ನಂದು ಜೊತೆ ಅವರು ನಾಮಿನೇಷನ್ ಬಗ್ಗೆ ಚರ್ಚೆ ಮಾಡಿದ್ದರು. ಅದನ್ನು ಗಮನಿಸಿದ ಸುದೀಪ್ ಎಚ್ಚರಿಕೆ ನೀಡಿದ್ದಾರೆ.
‘ಮುಂದಿನ ಬಾರಿ ಈ ರೀತಿ ಮಾಡಿದರೆ ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ. ನೀವಿಬ್ಬರು ಬೇರೆ ಬೇರೆ ಸ್ಪರ್ಧಿಗಳಾಗಿ ಆಡ್ತಾ ಇದೀರಿ. ಹಾಗಿದ್ದ ಮೇಲೆ ಚರ್ಚೆ ಮಾಡ್ಕೊಂಡು ನಾಮಿನೇಟ್ ಮಾಡುವಂತಿಲ್ಲ’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಇದನ್ನು ಜಶ್ವಂತ್ ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಅಂತ ಕಾದು ನೋಡಬೇಕಾಗಿದೆ.