- Advertisement -
Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.
ತ್ರಿಶಾಲ್ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇನ್ನು ಈ ಸಾವಿಗೆ ಕಾರಣವೇನು ಎಂದರೆ, ಪಾರಿವಾಳದ ಬೆಟ್ಟಿಂಗ್ ವಿಷಯಕ್ಕೆ ಸಂಬಂಧಿಸಿದಂತೆ, ಸ್ನೇಹಿತರ ಜೊತೆ ಜಗಳವಾಗಿದೆ. ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ ನೋಟ್ ಕೂಡ ಸಿಕ್ಕಿದ್ದು, ಆದರೆ ಅದನ್ನು ಇನ್ನೂ ಬಹಿರಂಗಪಡಿಸಿಲ್ಲ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
- Advertisement -