Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ. ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈಗ ರಾಜ್ಯದಲ್ಲಿ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿರುವುದು. ಬಡವರ ವಿರೋಧಿಯಾಗಿರುವ ಅವರಿಗೆ ಬಜೆಟ್ ಅರ್ಥವಾಗುವುದೂ ಇಲ್ಲ ಎಂದು ಸಿಎಂ ಕಿಡಿಕಾರಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ. ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದೇನೆ. ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದೆ.
ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ.
ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ… pic.twitter.com/5W8a89smwK— Siddaramaiah (@siddaramaiah) February 18, 2024
ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್
ಕರಿಮಣಿ ಮಾಲೀಕ ಹಾಡು ಹಾಡಿ, ತುಳು ಹಾಡಿಗೆ ರೀಲ್ಸ್ ಮಾಡಿದ ಕಿಲಿ ಪೌಲ್..
ಕಿಂಗ್ ಚಾರ್ಲ್ಸ್ಗೆ ಕ್ಯಾನ್ಸರ್: ತಂದೆಯ ಆರೋಗ್ಯ ವಿಚಾರಿಸಲು ತೆರಳಿದ ಪ್ರಿನ್ಸ್ ಹ್ಯಾರಿ..