ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? – ಬಿಜೆಪಿ

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ. ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ ಎಂದು ಹೇಳಿದೆ.

ಮಾನ್ಯ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ. √ ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ. √ ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ. ಏನಿದೆಲ್ಲ? ಎಂದು ಹೇಳಿದೆ..

ಮಾನ್ಯ ಡಿ.ಕೆ ಶಿವಕುಮಾರ್ ಅವರೇ, ಪಕ್ಷ ಮುನ್ನಡೆಸುವುದಕ್ಕೂ ಸಾಮರ್ಥ್ಯ ಬೇಕು. ಪದೇ ಪದೇ ನಿಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವ ಸಿದ್ದರಾಮಯ್ಯ ಬಣದ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಂಜುವ ನೀವು #ಅಸಹಾಯಕಅಧ್ಯಕ್ಷ ರೇ? ಎಂದು ಪ್ರಶ್ನಿಸಿದೆ.

About The Author