state news
ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಒಬ್ಬರ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಜೆ.ಪಿ.ನಡ್ಡಾ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.
ಜೆ.ಪಿ.ನಡ್ಡಾ ನಾಳೆಯ ಟೈಮ್ ಟೇಬಲ್ ಏನು..?
ನಾಳೆ ಬೆಳಗ್ಗೆ 9ಕ್ಕೆ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಿ, 9.45 ಕ್ಕೆ ಸಿ.ಟಿ. ರವಿ ಮನೆಯಲ್ಲಿ ಉಪಹಾರದ ಜೊತೆಗೆ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ. 10.30 ಬೈಕ್ ರ್ಯಾಲಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. 10.45 ರಿಂದ 11.45ರವರೆಗೆ ಕುವೆಂಪು ಕಲಾ ಮಂದಿರದಲ್ಲಿ ಬಿಜೆಪಿ ಪ್ರಬುದ್ಧರ ಸಭೆ ನಡೆಸಿ, 12ಕ್ಕೆ ಹೆಲಿಕಾಪ್ಟರ್ ಮೂಲಕ ಬೇಲೂರಿಗೆ ತೆರಳಲಿದ್ದಾರೆ. ಅಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ, ಸಂಜೆ ಹಾಸನದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ ಬೆಂಗಳೂರಿಗೆ ಆಗಮಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿಯಿದೆ.
ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!