ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಕಾರ್ಯಾಗಾರದಲ್ಲಿ ಪಕ್ಷದ ಇತಿಹಾಸ, ಜನಸಂಘದ ಕೊಡುಗೆ, ಶ್ಯಾಮ ಪ್ರಸಾದ್ ಮುಖರ್ಜಿಯಿಂದ ನರೇಂದ್ರ ಮೋದಿ ವರೆಗೆ ಬಿಜೆಪಿಯ ಬೆಳವಣಿಗೆ ಮತ್ತು ನಾಯಕತ್ವದ ಪಾಠಗಳನ್ನು ನೀಡಲಾಗುತ್ತದೆ ಎಂದಿದ್ದಾರೆ. ಇನ್ನು ಸಮಾವೇಶದಲ್ಲಿ 270ಕ್ಕೂ ಹೆಚ್ಚು ಶಾಸಕರು, ಸಂಸದರು ಮತ್ತು ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಈ ಕಾರ್ಯಾಗಾರದಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸಕರು, ಸಂಸದರು ಮತ್ತು ಸ್ಥಳೀಯ ನಾಯಕರಿಗೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡುವ ಬಗ್ಗೆ ಚರ್ಚೆಗಳು ನಡೆಯಲಿವೆ. ಶಕ್ತಿಶಾಲಿ ಬೂತ್ ನಿರ್ವಹಣೆಯಿಂದ ಹಿಡಿದು ವೋಟ್ ಬ್ಯಾಂಕ್ ಸಂಘಟನೆ, ಸಮುದಾಯ ಸಂಪರ್ಕ ಮೊದಲಾದವುಗಳ ಬಗ್ಗೆ ರಣತಂತ್ರ ರೂಪಿಸಲಾಗುತ್ತಿದೆ.