Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ [ಆ.10] ನಡೆದಿತ್ತು. ಮೃತ ಗೌತಮ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು.
ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದ ಪರಿಣಾಮವೇ ಇಂದು ಬಿಬಿಎಂಪಿ ಗುತ್ತಿಗೆದಾರ ಗೌತಮ್ ಕಾಮಗಾರಿ ಬಿಲ್ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿತ್ತು.
ಉತ್ತರ ಕೊಡಲ್ಲ, ಆಣೆ ಮಾಡೋಲ್ಲ, ಪ್ರತಿಭಟನೆ ಮಾಡಿದ್ರೆ ಬ್ಲ್ಯಾಕ್ ಮೇಲ್ ಎನ್ನುತ್ತ ಬೇಜವಾಬ್ದಾರಿಯಿಂದ ವರ್ತಿಸಿದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ಧರಾಮಯ್ಯ ಅವರೇ ಇದಕ್ಕೆ ನೇರ ಹೊಣೆ ಎಂಬುವುದಾಗಿಯೂ ಹೇಳಿತ್ತು.
ಇದೀಗ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ಸರ್ಕಾರ-ಗುತ್ತಿಗೆದಾರರ ಹಗ್ಗಜಗ್ಗಾಟಕ್ಕೆ ಬಲಿಯಾದ ಬಿಬಿಎಂಪಿ ಗುತ್ತಿಗೆದಾರ ಗೌತಮ್ ರವರ ಆತ್ಮಹತ್ಯೆಯನ್ನು ಖಂಡಿಸಿ ಮಂಡ್ಯದಲ್ಲಿ ಇಂದಿನಿಂದ ಆಗಸ್ಟ್ 14ರವರಗೆ “ಅಹೋರಾತ್ರಿ ಧರಣಿ ಸತ್ಯಾಗ್ರಹ” ಧರಣಿ ಕೂಡಾ ನಡೆಸಲಾಗುತ್ತಿದೆ. ಈ ಧರಣಿಯಲ್ಲಿ ಅನೇಕ ಬಿಜೆಪಿ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೈಯಲ್ಲಿ ಪೇ ಸಿಎಸ್ ಎಂಬ ಪೋಸ್ಟರ್ ಹಿಡಿದು ಬಿಜೆಪಿಗರು ಚೆಲುವರಾಯ ಸ್ವಾಮಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.
Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :
Jewellary exmination: ಹುಬ್ಬಳ್ಳಿಯಲ್ಲಿ ಆಭರಣ ಪ್ರದರ್ಶನ ಮತ್ತು ಮಾರಾಟ