Friday, June 20, 2025

Latest Posts

ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಂದುವರೆದ ಬಿಜೆಪಿ ಟ್ವೀಟ್ ವಾರ್

- Advertisement -

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.  ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಷಾಡಭೂತಿತನವನ್ನು ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ. ಇದೆಲ್ಲದಕ್ಕೂ ಮಂಡ್ಯದಲ್ಲಿ ನಡೆಯುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ.

3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಸಿದ್ದರಾಮಯ್ಯ ನವರು ಒಡಲೆಂದು ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ. ಸಿಎಂ ಆಗಿರುವಾಗ ನಿದ್ದೆ ಮಾಡಿ, ಈಗ ಚುನಾವಣೆ ಎಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಹಳೆ ಮೈಸೂರು ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಈ ಭಾಗದವರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿ ಕಡಗಣಿಸಿ ಒಡೆದಾಳುವ ನೀತಿ ಅನುಸರಿಸಿ ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕೆ ಇಳಿದುಬಿಟ್ಟರು. ಆದರೆ ಜನ ಇದಾವುದನ್ನು ಮರೆಯದೆ ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದರು. 2018ರ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರಿವಾದಾಗ ಸಿದ್ದರಾಮಯ್ಯನವರು ತಮ್ಮನ್ನು ನಂಬಿದವರನ್ನು ಅನಾಥರನ್ನಾಗಿಸಿ ಬಾದಾಮಿಗೆ ಓದಿ ಹೋದರು. ಅಲ್ಲಿಂದ ಮತ್ತೆ ಇಲ್ಲಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಆದರೆ ಒಡೆಯರ್ ಅವರಿಗೆ ಅಗೌರವದ ಎಕವಚನದ ಪದ ಬಳಕೆ ಮಾಡಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಈ ನದಿಗಳು ನಮ್ಮ ದೇಶದಲ್ಲಿ ಆಧ್ಯಾತ್ಮಿಕತೆಯ ಸ್ಥಳವಾಗಿದೆ..ಅತ್ಯಂತ 10 ಪವಿತ್ರ ನದಿಗಳು ನಿಮಗಾಗಿ..!

ಜೆಡಿಎಸ್ ವಿರುದ್ಧವೂ ಟ್ವೀಟ್ ವಾರ್ ನಡೆಸಿದ ಬಿಜೆಪಿ ಘಟಕ
ಇಷ್ಟು ವರ್ಷಗಳ ಕಾಲ ಜೆಡಿಎಸ್ ಗೆ ಅಧಿಕಾರ ಕೊಟ್ಟ ಜನರಿಗೆ ತಿರುಗಿ ಕೊಟ್ಟದ್ದು ಮಾತ್ರ ಶೂನ್ಯ. ಕುಮಾರಸ್ವಾಮಿ ಅವರು ಸಾರ್ವಜನಿಕವಾಗಿ ಕೆಣ್ಣಿರು ಸುರಿಸುವುದು ಕೇವಲ ಈ ಭಾಗದ ಜನರನ್ನು ಮೂರ್ಖರನ್ನಾಗಿಸಲು ಮಾಡುವ ತಂತ್ರ. ‘ಏನಾದರು ಮಾಡಿ ಅಧಿಕಾರ ಹಿಡಿಯಲೇಬೇಕು ಎನ್ನುವುದಷ್ಟೆ ಅವರ ಪಕ್ಷದ ಸಿದ್ಧಾಂತ. ಕೇವಲ ಹಳೆ ಮೈಸೂರು ಭಾಗದ ಜನರಿಂದ ಜೆಡಿಎಸ್ ಪಕ್ಷ ಬದುಕಿರುವುದು, ಅವರಿಗೇ ಇಂದು ದ್ರೋಹ ಬಗೆಯುತ್ತಿದೆ. ಜಿ.ಪಂ ನಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ. ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಜನರ ಲೂಟಿ ಮಾಡಿದ್ದಾರೆ. ಹೆಸರಲ್ಲಷ್ಟೇ ಜ್ಯಾತ್ಯತೀತತೆ ಆಗಿರುವ ಪಕ್ಷ ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ ಕೇವಲ ಒಂದು ಸಮುದಾಯದವರನ್ನು ನೆಚ್ಚಿ ಬದುಕುತ್ತಿರುವ ಆ ಸಮುದಾಯದ ಉದ್ಧಾರವನ್ನು ಕಡೆಗಣಿಸಿ ಅಲ್ಪಸಂಖ್ಯಾತರ ತುಷ್ಟಿಕರಣಕ್ಕಿಳಿದುಬಿಟ್ಟಿದೆ. ಕಾರ್ಯಕರ್ತರೇ ರಾಜಕೀಯದ ಬೆನ್ನುಲುಬು. ಆದರೆ ಜೆಡಿಎಸ್ ಕಾರ್ಯಕರ್ತರನ್ನೇ ಕಡೆಗಣಿಸಿ ಕೇವಲ ತಮ್ಮ ಕುಟುಂಬದವರನ್ನೇ ಚುನಾವಣಾ ಅಭ್ಯರ್ಥಿಯನ್ನಾಗಿಸುತ್ತದೆ. ಇದಕ್ಕೆ ಸ್ವಂತ ಕಾರ್ಯಕರ್ತರನ್ನೇ ನಂಬದ ಹೆಚ್. ಡಿ ರೇವಣ್ಣ ನವರ ಸಮಜಾಯಿಷಿ ಏನೆಂದರೆ ‘ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಟೋಪಿ ಹಾಕಿ ಹೋಗ್ತಾರೆ ಎನ್ನುವುದು ಎಂದು ಜೆಡಿಎಸ್ ವಿರುದ್ಧವೂ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.

- Advertisement -

Latest Posts

Don't Miss