Saturday, October 19, 2024

Latest Posts

Basavaraj Bommai : ಬೆಂಗಳೂರು ಕಾನೂನು ಸುವ್ಯವಸ್ಥೆ ಕೈ ತಪ್ಪುತ್ತಿದೆ : ಬೊಮ್ಮಾಯಿ

- Advertisement -

Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್  ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ  ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ‌ಮಾಡುವುದು ಪೊಲೀಸರ ಕೆಲಸ.

ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ‌ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪ ಮಾಡಿದರು.

ಇಲ್ಲೇ ನೆಲಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸವಾಗುತ್ತಿದೆ. ಅಂತರಾಷ್ಟ್ರೀಯ ಐಎಸ್ ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಉಗ್ರರ ವಿರುದ್ದದ ಕೇಸ್ ಗಳನ್ನು ಕೂಡಲೇ ತನಿಖೆಗೆ ಎನ್ ಐಎಗೆ ಹಸ್ತಾಂತರಿಸಬೇಕು. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಪೋಟ ಮಾಡುವ ಹುನ್ನಾರ ಇದೆ. ಇದನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಬಸವರಾಜ್  ಬೊಮ್ಮಾಯಿ ಹೇಳಿದರು.

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Siddaramaiah : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Police : ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ..!

- Advertisement -

Latest Posts

Don't Miss