Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.
ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್ಪಿ ಪಕ್ಷ ಈ ನಿರ್ಧಾರಕ್ಕೆ ಬಂದಿದೆ.
ಕೆಲ ದಿನಗಳ ಹಿಂದೆ ಎಸ್ಪಿ ಕೂಡ ಮೈತ್ರಿ ವಿಚಾರವಾಗಿ ಷರತ್ತು ವಿಧಿಸಿ, ಬಳಿಕ ಕಾಂಗ್ರೆಸ್ ಶರತ್ತಿಗೆ ಒಪ್ಪಿದ ಮೇಲೆಯೇ, ಭಾರತ್ ಜೋಡೋ ನ್ಯಾಯ ಯಾತ್ರೆಗೆ ಕೈ ಜೋಡಿಸಿತ್ತು. ಹಾಗಾಗಿ ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಸ್ಪರ್ಧಿಸಲಿದೆ.
ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ಕೊಡಬೇಕಂತೆ 1 ಸಾವಿರ ರೂಪಾಯಿ..
ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ