Saturday, July 12, 2025

Latest Posts

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

- Advertisement -

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರದ ಪ್ರತಿನಿಧಿಗಳು, ಅಧಿಕಾರಿಗಳು ಬಂದು ಅಹವಾಲು ಸ್ವೀಕರಿಸದಿರುವುದು ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರದ ಚೌಕಟ್ಟಿನ ಹೋರಾಟದ ಧ್ವನಿಯನ್ನು ವಿಧಾನಸಭೆಗೆ ಮುಟ್ಟಿಸುವ ಕೆಲಸವನ್ನು ವಿರೋಧ ಪಕ್ಷ ಮಾಡುತ್ತದೆ. ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ಮೈಸೂರು ನೀಡಿದೆ. ಇಲ್ಲಿನ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಇತರರಿಗಾಗಿ ಪಾಲಿಕೆ ನೌಕರರು ಕೆಲಸ ಮಾಡುತ್ತಾರೆ. ಅವರ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss