ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್. ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಹೌದು ಸಚಿವ ಬೈರತಿ ಸುರೇಶ್ ಅವ್ರ ಪುತ್ರ ಸಂಜಯ್ ಹಾಗೂ ಶಾಸಕ ಎಸ್. ಆರ್ ವಿಶ್ವನಾಥ್ ಅವ್ರ ಪುತ್ರಿ ಅಪೂರ್ವ ಇಬ್ಬರು ಕಾಲೇಜ್ ಸ್ನೇಹಿತರಾಗಿದ್ದರು. ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದಿದ್ದಾರೆ. ಆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹ, ಪ್ರೀತಿ ಇತ್ತು ಎಂದು ತಿಳಿದು ಬಂದಿದೆ.
ಇಬ್ಬರ ಪ್ರೀತಿಗೆ ಎರಡೂ ಕುಟುಂಬದ ಸದಸ್ಯರು ಒಪ್ಪಿಗೆ ನೀಡಿದ್ದು. ಶುಕ್ರವಾರ ಅಂತಿಮ ಹಂತದ ಮದುವೆ ಮಾತುಕತೆ ನಡೆಸಿದ್ದಾರೆ. ಶಾಸಕ ಎಸ್ ಆರ್ ವಿಶ್ವನಾಥ್ ಮನೆಗೆ ಭೈರತಿ ಸುರೇಶ್ ಕುಟುಂಬ ತೆರಳಿ ಮದುವೆ ಮಾತುಕತೆ ನಡೆಸಿದ್ದಾರೆ.
ಹೀಗಾಗಿ ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ಬೀಗರುಗಳಾಗಲಿದ್ದಾರೆ.