State news:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ “ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯವರು ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯುವಕರು,ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು,ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!