Hubli News: ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ತಮ್ಮ ಪುತ್ರಿ ಮನೆಗೆ ಹೋದ ಸಂದರ್ಭದಲ್ಲಿಂದು ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಮೃತದೇಹವನ್ನು ಇವತ್ತು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಿ.ಎಂ. ನಿಂಬಣ್ಣವರ ೨೦೧೮ ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಮಾಜಿ ಶಾಸಕ ಸಿಎಂ ನಿಂಬಣ್ಣವರ ಅವರ ಅಗಲಿಕೆಯಿಂದಾಗಿ ಕಲಘಟಗಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ಮುಖಂಡರು ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
Prahlad Joshi : ಆರೋಪಿಯನ್ನು ರಕ್ಷಿಸಲು ಪ್ರಯತ್ನ ಪಡ್ತಾರೆ ಅಂದ್ರೆ ಇದು ಆಘಾತಕಾರಿ : ಜೋಶಿ
Amaranath yathra : ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ : ಜೋಶಿ