Tuesday, April 15, 2025

Latest Posts

ಸಿ.ಟಿ.ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ: ಸಿಎಂ

- Advertisement -

Mandya News: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ವೇಳೆ ಮಾಧ್ಯಮದವರು ಸಿ.ಟಿ.ರವಿ ಕೇಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದು ಸಿಎಂ ಹೇಳಿದರು.

ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

- Advertisement -

Latest Posts

Don't Miss