ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ – CM ಬಸವರಾಜ ಬೊಮ್ಮಾಯಿ

ವಿಜಯಪುರ : ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.

About The Author