Saturday, September 21, 2024

Latest Posts

ಅ*ತ್ಯಾಚಾರ ಪ್ರಕರಣ: ಮುನಿರತ್ನಗೆ 14 ದಿನ ಜೈಲು! ಜಡ್ಜ್‌ ಮುಂದೆ ಮುನಿ ಅಳಲು

- Advertisement -

Movie News: “ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾಗಿದ್ದವನು. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ.

ಹೀಗೆ ಪರಿಪರಿಯಾಗಿ ನ್ಯಾಯಾಧೀಶರ ಮುಂದೆ ಬೇಡಿಕೊಂಡಿದ್ದು ಬೇರಾರೂ ಅಲ್ಲ, ಶಾಸಕ ಮುನಿರತ್ನ… ಹೌದು, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ಜೈಲಿನಲ್ಲಿದ್ದ ಶಾಸಕ ಮುನಿರತ್ನ ಬಿಡುಗಡೆಯಾಗಿದ್ದರು. ಅದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಶನಿವಾರ (ಇಂದು) ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ಪರಿಶೀಲಿಸಿದ ನ್ಯಾಯಾಲಯ ಮುನಿರತ್ನ ಅವರನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸದ್ಯ ಶಾಸಕ ಮುನಿರತ್ನ ಅವರಿಗೆ ಅತ್ಯಾಚಾರ ಪ್ರಕರಣ ಸಂಕಷ್ಟಕ್ಕೆ ಸಿಲುಕಿಸಿರುವುದು ಸ್ಪಷ್ಟ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಶನಿವಾರ ಕೋರ್ಟ್ ಇದ್ದುದರಿಂದ ಅವರನ್ನು ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಹೀಗಾಗಿ ಶಾಸಕ ಮುನಿರತ್ನ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದರು. ಈ ಕುರಿತು ದೂರು ದಾಖಲಾಗಿತ್ತು. ಹಾಗಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕಳೆದ ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಅವರನ್ನು ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ಸದ್ಯ ನ್ಯಾಯಾಲಯ ಅವರನ್ನು ಹದಿನಾಲ್ಕು ದಿನಗಳವರೆಗೆ ಅಂದರೆ ಅಕ್ಟೋಬರ್‌ ೫ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಧೀಶರ ಮುಂದೆ ಶಾಸಕ ಮುನಿರತ್ನ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಹೌದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಮುನಿರತ್ನ ಅವರು, ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಅಳಲು ತೋಡಿಕೊಂಡಿದ್ದಾರೆ. ” ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ” ಎಂದು ಮುನಿರತ್ನ ಅಲವತ್ತುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಎಲ್ಲಿ ಕೊಡಬೇಕೋ ಅಲ್ಲಿಯೇ ರಾಜೀನಾಮೆ ಕೊಡಿ ಎಂದು ಹೇಳಿದ್ದಾರೆ. ನಂತರ, ಪೊಲೀಸ್ ಕಸ್ಟಡಿಗೆ ಕೇಳುತ್ತೀರಾ ಎಂದು ಪೊಲೀಸರನ್ನು ಪ್ರಶ್ನಿಸಿದರು. ಇದೇ ವೇಳೆ, ‘ಇಲ್ಲ’ ಎಂದು ಪಿಪಿ ಉತ್ತರ ನೀಡಿದರು.

- Advertisement -

Latest Posts

Don't Miss