Hubli News: ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳದ ಲೋಟಸ್ ಬಾರ್ ಹತ್ತಿರವಿರುವ ಚಿಕ್ಕು ತೋಟದಲ್ಲಿ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿದ ಮೂವರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧನ ಮಾಡುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ.
ಏ.7 ರಂದು ರಾತ್ರಿ ವೇಳೆಯಲ್ಲಿ ಸರಾಯಿ ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಷಣ್ಮುಖಪ್ಪ ಹಡಪದ ಎಂಬಾತನನ್ನು ಪ್ರವೀಣ್ ಕುಬಿಹಾಳ (25), ಹನುಮಂತ ಮಾಳಗಿಮನಿ (25), ಸಹದೇವ ನೂಲ್ವಿ (24) ಎಂಬ ಆರೋಪಿಗಳೆ ಕೊಲೆ ಮಾಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ಮತ್ತು ನಾಲ್ಕು ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ ಪೊಲೀಸ್ ಆಯುಕ್ತರಾದ ಡಾ. ಗೋಪಾಲ ಬ್ಯಾಕೋಡ, ಧಾರವಾಡ ಎಸ್.ಪಿ. ಎನ್.ವಿ.ಭರಮನಿ, ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಡಿ.ಎಸ್.ಪಿ ಶಿವಾನಂದ ಕಟಗಿ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಪಿಎಸ್ಐ ಸಚಿನ ಅಲಮೇಲಕರ, ಪಿಎಸ್ಐ ಅಭಿಜಿತ್, ಎ.ಎಸ್.ಐ ಎನ್.ಎಮ್.ಹೊನ್ನಪ್ಪನವರ, ನಾರಾಯಣ ಹಿರೇಹೊಳ್ಳಿ ಹಾಗೂ ಸಿಬ್ಬಂದಿಗಳಾದ ಎ.ಎ.ಕಾಕರ, ಚನ್ನಪ್ಪ ಬಳ್ಳೊಳ್ಳಿ, ಸಿ.ಬಿ.ಜನಗಣ್ಣವರ, ನಾಗಪ್ಪ ಸಂಶಿ, ವಾಯ್.ಡಿ.ಕುಂಬಾರ, ನಾಗಯ ಮಾಣಿಕ, ಪ್ರೇಮನಾಥ ಹಾಗೂ ತಾಂತ್ರಿಕ ಸಿಬ್ಬಂದಿಯವರಾದ ಆರೀಫ್ ಗೋಲಂದಾಜ, ವಿಠ್ಠಲ ಇವರನ್ನು ಒಳಗೊಂಡ ತನಿಖೆ ತಂಡದ ಸದಸ್ಯರು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಪ್ರಕರಣವನ್ನು ಭೇದಿಸಿದ ವಿಶೇಷ ತನಿಖಾ ತಂಡದ ಸದಸ್ಯರಿಗೆ ಬಹುಮಾನ ಘೋಷಿಸಲಾಗಿದೆ.
ಕಂಪನಿಯೊಂದಕ್ಕೆ ನೀಡಿದ್ದ ಸಮೋಸಾದಲ್ಲಿ ಕಂಡುಬಂದಿದ್ದು ಕಾಂಡೋಮ್, ಗುಟ್ಕಾ..