Wednesday, August 26, 2026

ಕಾನೂನು

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

ಬೀದರ್‌ ವಿವಿ ಭ್ರಷ್ಟರಿಗೆ ಲೋಕಾಯುಕ್ತ ಶಾಕ್

ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ. 2017ರಿಂದ 2021ರ ಅವಧಿಯಲ್ಲಿ, ಬೀದರ್‌ ವಿವಿಯಲ್ಲಿ, ಅವ್ಯವಹಾರ ನಡೆದಿದೆ...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

ಬುರುಡೆ ಗ್ಯಾಂಗ್‌ಗೆ SIT ಫುಲ್ ಗ್ರಿಲ್!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್‌, ತಿಮರೋಡಿ, ಜಯಂತ್, ಸಮೀರ್‌, ವಿಠಲ ಗೌಡ, ಪ್ರದೀಪ್‌ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ. ಪ್ರತಿಯೊಬ್ಬರಿಗೂ ಬುಲಾವ್‌ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....

MLC ನಾಮನಿರ್ದೇಶನ ಪಟ್ಟಿಗೆ ಗವರ್ನರ್‌ ಮುದ್ರೆ

ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್‌ ಚಂದ್‌...

ಪ್ರಜ್ವಲ್‌ಗೆ ಕ್ಲರ್ಕ್‌ ಕೆಲಸ .. H.D. ರೇವಣ್ಣ ಬೇಸರ

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್‌ 15,528ನೇ ನಂಬರ್‌ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್‌ ಕೆಲಸವನ್ನೂ ನೀಡಲಾಗಿದೆ. ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತಾಪ್ ಸಿಂಹ ಅರ್ಜಿ ‌

ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್​ ಸಿಂಹ, ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಹೈಕೋರ್ಟ್‌ಗೆ ಸಾರ್ವಜನಿಕ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img