Friday, November 28, 2025

ಹವಾಮಾನ

ಭೀಕರ ಚಳಿ–ಮಳೆ ಶುರು, ರಾಜ್ಯದಲ್ಲಿ ‘ಡಬಲ್’ ಅಟಾಕ್!

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...

ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...

ರಾಜ್ಯದಲ್ಲಿ ಇನ್ಮುಂದೆ ಚಳಿ ವ್ಯಾಪಕ ಆದರೂ ಬುಧವಾರ ಮತ್ತೆ ಮಳೆಯ ಸಾಧ್ಯತೆ!

ಚಂಡಮಾರುತದ ಪ್ರಸರಣ ತೀವ್ರತೆ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿಯ ಪೂರ್ವ ಹಾಗೂ ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಮಧ್ಯ ಭಾಗದಲ್ಲಿದ್ದು, ಅದು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...

ರಾಜ್ಯದ ಹಲವೆಡೆ ಮಳೆ, ಮಳೆ, ಮಳೆ! ಎಲ್ಲೆಲ್ಲಿ ಅಲರ್ಟ್?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...

ರಾಜ್ಯದಲ್ಲಿ ವರುಣನ ವಿರಾಮ : ಎಲ್ಲೆಡೆ ಒಣ ಹವೆಯ ವಾತಾವರಣ

ರಾಜ್ಯಾದ್ಯಂತ ಮಳೆ ಆರ್ಭಟ ಈಗ ಕಡಿಮೆಯಾಗಿದ್ದು, ನ.11 ರಂದು ಸಂಪೂರ್ಣ ಕರ್ನಾಟಕದಲ್ಲಿ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಆಗಾಗ ಮಳೆ ಕಾಣಿಸಿಕೊಂಡಿದ್ದರೂ, ಈಗ ವರುಣನ ಅಬ್ಬರಕ್ಕೆ ಸಂಪೂರ್ಣ ಬ್ರೇಕ್ ಬಿದ್ದಂತಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಸಧ್ಯಕ್ಕೆ ಮಳೆಯ ಸಾಧ್ಯತೆ ಇಲ್ಲ. ವರುಣನ...

ಮಳೆ ಜೊತೆಗೆ ಭಾರೀ ಚಳಿ ಕಾಟ ಹವಾಮಾನ ಇಲಾಖೆ ಎಚ್ಚರಿಕೆ!

ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ. ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...

ಕರ್ನಾಟಕದಲ್ಲಿ ಮತ್ತೆ ಮಳೆ ಪ್ರಹಾರ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆ ಚಟುವಟಿಕೆ ಜೋರಾಗಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು...

ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರು : 72 ಗಂಟೆಗಳಲ್ಲಿ ಮತ್ತೆ ಅಬ್ಬರ!

ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...

ಆಂಧ್ರ, ತೆಲಂಗಾಣದಲ್ಲಿ ಜಲಪ್ರಳಯ

ಮೊಂಥಾ ಚಂಡಮಾರುತದ ತೀವ್ರತೆಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ 304 ಮಂಡಲಗಳಲ್ಲಿ, 87 ಸಾವಿರ ಹೆಕ್ಟೇರ್‌ ಬೆಳೆಗಳು, 380 ಕಿಲೋ ಮೀಟರ್‌ ರಸ್ತೆಗಳು ಮತ್ತು 14 ಸೇತುವೆಗಳು ಹಾನಿಯಾಗಿವೆ. ಹತ್ತಿ, ಭತ್ತ, ಮೆಕ್ಕೆಜೋಳ, ಉದ್ದು ಜೊತೆಗೆ 59 ಸಾವಿರ ಹೆಕ್ಟೇರ್‌ನಲ್ಲಿದ್ದ ಬೆಳೆಗಳು ಜಲಾವೃತವಾಗಿವೆ. 78 ಸಾವಿರದ 796 ರೈತರು ಬೆಳೆ ಹಾನಿ...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img