Tuesday, July 21, 2026

ರಾಜ್ಯ ಸರ್ಕಾರ

ಬಿಡದಿಯಲ್ಲಿ ಶುರುವಾಯ್ತು ಮಹಾ ಹೋರಾಟ!

ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು ಭಾನುವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಯೋಜನೆ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿತು. 'ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯತ್‌ಗಳ ರೈತ ಭೂ ಹಿತರಕ್ಷಣಾ ಸಮಿತಿ'ಯ ಭಾಗವಾಗಿರುವ ರೈತರು,...

ಇದೇ ಅವಧಿಗೆ ಡಿಕೆಶಿ ಸಿಎಂ ಆಗ್ತಾರಾ?

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್‌ ಟೂರ್‌ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್‌ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...

ರಾಜಧಾನಿ ಬೆಂಗಳೂರು ತುಂಬಾ ಅಕ್ರಮ ವಿದೇಶಿಗರು?

ಅಕ್ರಮ ವಿದೇಶಿಗರು ಹಾಗೂ ವಲಸಿಗರು ದೇಶದ ಭದ್ರತೆಗೆ ಗಂಭೀರ ಅಪಾಯ ಎಂಬ ವಿಚಾರವನ್ನು ಪುನರುಚ್ಚರಿಸಿರುವ ಕರ್ನಾಟಕ ಹೈಕೋರ್ಟ್, ರಾಜ್ಯದಲ್ಲಿ ಅಂದಾಜು 20 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ಸರ್ಕಾರದ ಮಾಹಿತಿಯನ್ನು ಉಲ್ಲೇಖಿಸಿದೆ. ಈ ಸಂಬಂಧ ಅಕ್ರಮ ವಲಸಿಗರ ವಿರುದ್ಧ ರಾಜ್ಯ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬುದರ ಕುರಿತು ವಿವರವಾದ ವರದಿ...

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...

ಆರೋಗ್ಯಾಧಿಕಾರಿ ಹುದ್ದೆ ಕೈಬಿಡುವ ಯತ್ನ

ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ...

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ಕೇಂದ್ರ ಸರ್ಕಾರಕ್ಕೆ ಉಗ್ರಪ್ಪ ಲಾಸ್ಟ್‌ ವಾರ್ನ್‌

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...

ಹೆಚ್ಚು ಕೂಲಿ ಆಮಿಷವೊಡ್ಡಿ ಅಮಾನವೀಯವಾಗಿ ನಡೆಸಿಕೊಂಡ್ರು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ. ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...

ವಿಬಿ ಜಿ ರಾಮ್ ಜಿ ವಿರುದ್ಧ ಸರ್ಕಾರದಿಂದ ತುರ್ತು ಸಚಿವ ಸಂಪುಟ ಸಭೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ, ರಾಜ್ಯ ಸರ್ಕಾರ ಜನವರಿ 14ರಂದು ಬೆಳಗ್ಗೆ 11.30ಕ್ಕೆ ವಿಶೇಷ ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಹೆಸರನ್ನು ಹಾಗೂ ಅದರ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನ...

17ನೇ ಬಜೆಟ್ – ಪವರ್ ಸಿಗ್ನಲ್: ಟಗರು ಪ್ಲಾನ್ ಇದೇನಾ?

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನಾಯಕತ್ವ’ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ, ಮಾರ್ಚ್ 6ರಂದು 2026–27ನೇ ಆರ್ಥಿಕ ಸಾಲಿನ ಆಯವ್ಯಯವನ್ನು ಮಂಡಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕ ಕೆ.ಎನ್.ರಾಜಣ್ಣ ಅವರ ‘ಆಗಸ್ಟ್ ಕ್ರಾಂತಿ’ ಕುರಿತ ಹೇಳಿಕೆಗಳು ಪಕ್ಷದೊಳಗೆ ಸಾಕಷ್ಟು ಪ್ರತಿಕ್ರಿಯೆ–ಪ್ರತಿಹೇಳಿಕೆಗಳಿಗೆ...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img