Sunday, May 10, 2026

ರಾಜಕೀಯ

ಮುದ್ದೆ, ಕೋಳಿ, ಇಡ್ಲಿ ಗುಟ್ಟೇನು?

ಬಿಜೆಪಿ ನಾಯಕರು ರಾತ್ರಿಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಾಗಿ ಮುದ್ದೆ ನಾಟಿ ಕೋಳಿ ತಿನ್ನುತ್ತಾರೆ. ಬೆಳಗ್ಗೆ ಸಿದ್ದರಾಮಯ್ಯ ಮನೆಯಲ್ಲಿ ತಟ್ಟೆ ಇಡ್ಲಿ ತಿನ್ನುತ್ತಿದ್ದಾರೆ. ಈ ಪಕ್ಷ ಹೇಗೆ ಉದ್ಧಾರ ಆಗುತ್ತದೆ?. ಹೀಗಂತ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಯತ್ನಾಳ್, ಮೇಲಿನವರು ಸುಮ್ಮನೆ ಕೂತಿದ್ದಾರೆ. ಈಗ ತಾನು ಹೋದರೆ...

ಇಬ್ಬರು ಯುವರಾಜರ ಮೇಲೆ ಪ್ರಧಾನಿ ಮೋದಿ ಗುಡುಗು

ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ರ‍್ಯಾಲಿಯಲ್ಲಿ ಭಾಷಣದ ವೇಳೆ ವಿರೋಧಿ ಪಡೆಗಳ ವಿರುದ್ಧ ಗುಡುಗಿದ್ದಾರೆ. ಬಿಹಾರದ ಚುನಾವಣಾ ಕಣದಲ್ಲಿ, ತಮ್ಮನ್ನು ಯುವರಾಜರು ಎಂದು ಭಾವಿಸುವ ಇಬ್ಬರು ಯುವಕರಿದ್ದಾರೆ. ಅವರು ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ, ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ....

2028ಕ್ಕೆ ಜಮೀರ್‌ ಅಹಮದ್ ಭವಿಷ್ಯ

2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು, ಸಚಿವ ಜಮೀರ್ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಒಂದೇ ಒಂದು ಹಕ್ಕುಪತ್ರ ಕೊಟ್ಟಿಲ್ಲ. ರಾಜ್ಯದಲ್ಲಿ ಸರ್ವೆ ನಡೆಸಿ...

ಚಿತ್ತಾಪುರ ಪಥಸಂಚಲನಕ್ಕೆ ಹೈಕೋರ್ಟ್‌ ನಕಾರ

ನವೆಂಬರ್‌ 2ರಂದು ಚಿತ್ತಾಪುರದಲ್ಲಿ ನಡೆಯಲು ಉದ್ದೇಶಿಸಿದ್ದ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ನವೆಂಬರ್‌ 5ರಂದು ಮತ್ತೆ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿ ಸಭೆ ನಡೆಸುವಂತೆ, ಕಲಬುರಗಿ ಹೈಕೋರ್ಟ್‌ ಪೀಠ ಸೂಚಿಸಿದೆ. ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ್ದು, ಶಾಂತಿ ಸಭೆಯ ವರದಿ ಸಲ್ಲಿಸುವಂತೆ ಸೂಚಿಸಿದೆ. ಸರ್ಕಾರದ ಪರ ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಅಕ್ಟೋಬರ್‌ 28ರಂದು ನಡೆದಿದ್ದ...

ಅ.31ಕ್ಕೆ ಖರ್ಗೆ ಕೋಟೆಯಲ್ಲಿ ಪಥಸಂಚಲನ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಗುರುಮಠಕಲ್‌ ಪಟ್ಟಣದಲ್ಲಿ, ಅಕ್ಟೋಬರ್‌ 31ರಂದು RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ. ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ 8 ಬಾರಿ ಗುರುಮಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನಕ್ಕೆ, ಮಾರ್ಗ ಮತ್ತು ಭದ್ರತಾ...

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಆ ದಿನಕ್ಕೆ ಕಾಯುತ್ತಿದ್ದಾರೆ ಡಿಕೆಶಿ!

ನವೆಂಬರ್‌ 20ಕ್ಕೆ ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಬಂದಾಗ ಪಕ್ಷ ನಿಷ್ಠೆ ಮತ್ತು ಸಂಘಟನಾ ಸಾಮರ್ಥ್ಯ ಪ್ರದರ್ಶಿಸಲು, ಡಿ.ಕೆ. ಶಿವಕುಮಾರ್‌ ಸಜ್ಜಾಗಿದ್ದಾರೆ. ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳಿಗೆ ಶಂಕು ಸ್ಥಾಪನೆ ಮಾಡುವುದರ ಮೂಲಕ, ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ...

ಚೀನಾ ಮೇಲೆ ಸಾಫ್ಟ್‌ ಆದ ಟ್ರಂಪ್ 10% ಸುಂಕ ಇಳಿಸಿದ್ದು ಯಾವ ಕಾರಣಕ್ಕೆ?

ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇಕಡ 57ರಷ್ಟು ಸುಂಕವನ್ನು, ಶೇಕಡ 47ಕ್ಕೆ ಇಳಿಸಲು, ಡೊನಾಲ್ಡ್‌ ಟ್ರಂಪ್‌ ನಿರ್ಧರಿಸಿದ್ದಾರೆ. ಸೌಥ್‌ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ, ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಅವರನ್ನ ಟ್ರಂಪ್‌ ಭೇಟಿಯಾಗಿದ್ದಾರೆ. ಈ ವೇಳೆ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದು ಬಂದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ...

ಮೋದಿ, ಶಾ, ನಡ್ಡಾ V/S ರಾಹುಲ್‌ ಗಾಂಧಿ

ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img