ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
ಹಾಸನ ನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಅಂತೂ ಇಂತೂ ಅಂತಿಮ ಹಂತ ಮುಟ್ಟಿದೆ. ಕಳೆದ 7 ವರ್ಷದಿಂದ ಆಮೆವೇಗದಲ್ಲಿ ಸಾಗಿದ್ದ ಕಾಮಗಾರಿ, 2025ರ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಎನ್.ಆರ್. ವೃತ್ತ ಹಾಗೂ ಹೊಸ ಬಸ್ ನಿಲ್ದಾಣದ ನಡುವೆ, 98 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿತ್ತು. ರೈಲ್ವೆ ಮೇಲ್ಸೇತುವೆ ಮತ್ತೊಂದು ಭಾಗದ ಕಾಮಗಾರಿ ಅನುದಾನದ...
ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. 15 ದಿನಗಳಿಂದ ಎಸ್ಐಟಿ ಕಸ್ಟಡಿಯಲ್ಲಿ ಇದ್ದ ಚಿನ್ನಯ್ಯನ ಕಸ್ಟಡಿ ಇಂದು ಮುಕ್ತಾಯವಾಗುತ್ತಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಇಂದು ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಆಗಸ್ಟ್ 23ರಂದು ಬಂಧನಕ್ಕೊಳಗಾದ ಚಿನ್ನಯ್ಯನನ್ನು ಆರಂಭದಲ್ಲಿ...
ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...
2028ರ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳು ಬಾಕಿ ಇವೆ. ಹೀಗಲೇ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಹಲವು ರಾಜಕೀಯ ನಾಯಕರು ಭವಿಷ್ಯವನ್ನೂ ನುಡಿದಿದ್ದಾರೆ. ಇನ್ನು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 2028ಕ್ಕೆ ನಾನೇ ಸಿಎಂ ಅಂತಾ ಪದೇ ಪದೇ ಬಹಿರಂಗವಾಗಿ ಹೇಳಿಕೆ...
ಧರ್ಮಸ್ಥಳ ಪ್ರಕರಣದಲ್ಲಿ ಪ್ರಾರಂಭದಿಂದಲೂ ಮೌನವಹಿಸಿದ್ದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬಿಜೆಪಿ ನಿಯೋಗದ ಭೇಟಿ ಬಳಿಕ ಮೌನಮುರಿದಿದ್ರು. ಮೊದಲ ಬಾರಿಗೆ ಬಹಿರಂಗವಾಗಿ ತಮಗಾಗುತ್ತಿರುವ ಅಸಮಾಧಾನ, ನೋವುಗಳ ಬಗ್ಗೆ ಮಾತನಾಡಿದ್ರು. ತಮ್ಮ ಮತ್ತು ಕುಟುಂಬದವರ ಮೇಲಿನ ಆರೋಪಗಳೆಲ್ಲಾ ಆಧಾರ ರಹಿತ ಅಂತಾ ಹೇಳಿದ್ರು. ಈಗ ಮತ್ತೊಮ್ಮೆ, ಧರ್ಮಸ್ಥಳದಲ್ಲಿ ನಡೆದ ಧರ್ಮ ಜಾಗೃತಿ ಸಮಾವೇಶದಲ್ಲಿ, ವೀರೇಂದ್ರ ಹೆಗ್ಗಡೆಯವರು ಮನಬಿಚ್ಚಿ...
ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ.
ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...
ಧರ್ಮಸ್ಥಳ ಪ್ರಕರಣದ ಬಗ್ಗೆ, ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಯಾಗ್ತಿದೆ. ಈ ವಿಚಾರ ಕೇಂದ್ರ ಸರ್ಕಾರದ ಅಂಗಳ ಮುಟ್ಟಿದ್ದು, ಎನ್ಐಎ ತನಿಖೆಗೆ ಆಗ್ರಹ ಹೆಚ್ಚಾಗ್ತಿದೆ. ರಾಜ್ಯದ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಾಗೂ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ರಾಜ್ಯ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ...