Sunday, July 5, 2026

ರಾಜ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೂಡಲೇ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಭದ್ರತೆ ಒದಗಿಸಿ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಮತೀಯ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತಲು ಅವಕಾಶ ಮಾಡಿಕೊಡಬಾರದು. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕೂಡಲೇ ಅವರ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಯಾವ ಸಂಘಟನೆಗಳಿವೆ...

ಶಿವಮೊಗ್ಗ: ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ನಾನು ಈ ಹೇಳಿಕೆ ನೀಡಿಲ್ಲ, ಪ್ರಚೋದನಕಾರಿ ಪೋಸ್ಟ್ ಬಗ್ಗೆ ಪೊಲೀಸರಿಗೆ ದೂರು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನನ್ನ ಹೇಳಿಕೆ ತಿರುಚಿ, ಪ್ರಚೋದನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುತ್ತದೆ ಎಂಬುದಾಗಿ...

ಪ್ರವೀಣ್ ನೆಟ್ಟಾರು ಕೊಲೆ; ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ...

ಶಿವಮೊಗ್ಗ: ಭಾರತೀಯ ಸೇನೆಗೆ ಸೇರಬಯಸುವವರಿಗೆ ಪೂರ್ವ ಸಿದ್ಧತೆ, ಮಾರ್ಗದರ್ಶನ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುತ್ತಿದ್ದು, ಅರ್ಹ...

ರೈತರೇ ಗಮನಿಸಿ: ಪಿಎಂ ಕಿಸಾನ್ ಯೋಜನೆಗಾಗಿ ಇ-ಕೆವೈಸಿ ಮಾಡಿಸಲು ಅವಧಿ ವಿಸ್ತರಣೆ

ಬಾಗಲಕೋಟೆ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪಿ.ಎಂ.ಕಿಸಾನ್‍ದಡಿ ಪರಿಹಾರ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪ್ರತಿ ಫಲಾನುಭವಿಯು ಇ-ಕೆವೈಸಿ ಮಾಡಿಸಲು 31 ಜುಲೈ 2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇ-ಕೆವೈಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್‍ನ ಪಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ...

ಹಾವೇರಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು...

ಇನ್ಮುಂದೆ ‘1ನೇ ತರಗತಿ’ಗೆ ದಾಖಲಾಗಲು 6 ವರ್ಷ ಕಡ್ಡಾಯ – ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಇದುವರೆಗೆ 1ನೇ ತರಗತಿಗೆ ದಾಖಲಾಗೋದಕ್ಕೆ 5.5 ವರ್ಷವನ್ನು ನಿಗದಿ ಪಡಿಸಲಾಗಿತ್ತು. ಈ ವಯೋಮಿತಿಯನ್ನು ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. ಇನ್ಮುಂದೆ 6 ವರ್ಷ ಮಕ್ಕಳಿಗೆ 1ನೇ ತರಗತಿಗೆ ದಾಖಲಾಗೋದಕ್ಕೆ ವಯಸ್ಸು ಜೂನ್ 1ಕ್ಕೆ ಪೂರೈಸಿರಬೇಕು ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ...

ಪೌರ ನೌಕರರ ಬೇಡಿಕೆ ಶೀಘ್ರ ಈಡೇರಿಕೆಗೆ ಕ್ರಮ: ಸಚಿವ ಎಂಟಿಬಿ ನಾಗರಾಜ್‌

ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ರಾಜ್ಯ...

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜು.28ರಿಂದ ನಡೆಯುವ ಜನೋತ್ಸವ ಸಮಾವೇಶದಲ್ಲಿ ಉತ್ತರ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img