ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್ ಹೇಳಿದ್ರು. ದಳಪತಿ ವಿಜಯ್ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...
ನವೆಂಬರ್ 11ರ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಮರು ಮತ ಎಣಿಕೆ ನಡೆಯುತ್ತಿದ್ದು, ಕೋಲಾರ ನಗರ ಮತ್ತು ಮಾಲೂರು ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಈಗಾಗಲೇ ಮರು ಮತಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಕೋಲಾರ ನಗರ ಹಾಗೂ ಮಾಲೂರಿನಲ್ಲಿ...
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...
ನವೆಂಬರ್ ಕ್ರಾಂತಿಯ ಕಿಚ್ಚಿನ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದು ಐತಿಹಾಸಿಕ ದಾಖಲೆಯತ್ತ ದಾಪುಗಾಲಿಡುತ್ತಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ, ಸಿಎಂ ಆಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ದೇವರಾಜ ಅರಸು ಅವರ ದಾಖಲೆಯನ್ನು, ಸಿದ್ದರಾಮಯ್ಯ ಮುರಿಯಲಿದ್ದಾರೆ. ಆದರೆ, ಇದು ಸಾಕಾರಗೊಳ್ಳಬೇಕಾದರೆ ಸಿದ್ದರಾಮಯ್ಯ ಅವರು, ಜನವರಿವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕು. ಅಧಿಕಾರ ಹಂಚಿಕೆ ಊಹಾಪೋಹಗಳು ನಿಜವಾಗದೇ ಇದ್ದಲ್ಲಿ,...
'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...
ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ.
ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...
ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು.
ಆರ್ಎಸ್ಎಸ್ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...